ಬ್ರೇಕಿಂಗ್ ನ್ಯೂಸ್
01-08-21 04:15 pm Mangaluru Correspondent ಕರಾವಳಿ
ಮಂಗಳೂರು, ಆ.1: ಒಂದೆಡೆ ಕೊರೊನಾ 3ನೇ ಅಲೆಯ ನೆಪದಲ್ಲಿ ಕೋವಿಡ್ ನಿಯಮಗಳನ್ನು ಜಿಲ್ಲಾಡಳಿತ ಹೇರಿದ್ದು ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಆದರೆ, ಜಿಲ್ಲಾಡಳಿತದ ನಿಯಮವನ್ನೇ ಉಲ್ಲಂಘಿಸಿ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಗ್ರಹಣ ಸಮಾರಂಭ ನಡೆಸಲಾಗಿದ್ದು ಕೋವಿಡ್ ನಿಯಮ ಅನುಸರಿಸದೆ ಇನ್ನೂರಕ್ಕೂ ಹೆಚ್ಚು ಜನರು ಸೇರಿದ್ದಾರೆ.




ರಾಜಕೀಯ ಸಮಾರಂಭಗಳಿಗೆ ನಿರ್ಬಂಧ ವಿಧಿಸಿದ್ದರೂ ಕ್ಯಾರೇ ಅನ್ನದೇ ಕಾರ್ಯಕ್ರಮ ನಡೆಸಿದ್ದು ನೂರಾರು ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಕಾರ್ಯಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದು ನೂತನ ಪದಾಧಿಕಾರಿಗಳ ಪದಗ್ರಹಣಕ್ಕಾಗಿ ಸಮಾರಂಭ ಏರ್ಪಡಿಸಲಾಗಿತ್ತು. ವೇದಿಕೆಯಲ್ಲೂ ಸಾಮಾಜಿಕ ಅಂತರವಿಲ್ಲದೇ ಹತ್ತಾರು ನಾಯಕರು ಸೇರಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಎಲ್ಲ ರೀತಿಯ ಕಾರ್ಯಕ್ರಮ ನಿಷೇಧಿಸಿ ನಿನ್ನೆಯಷ್ಟೇ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ರದ್ದು ಪಡಿಸಲಾಗಿತ್ತು. ಇದೀಗ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು ಕೈ ನಾಯಕರ ವಿರುದ್ಧ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕು.
Congress leaders break covid 19 rules hundreds gathered amid no permission for political program. The program was held at Congress Bhavan at Mallikate in Mangalore.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm