ಬ್ರೇಕಿಂಗ್ ನ್ಯೂಸ್
01-08-21 04:15 pm Mangaluru Correspondent ಕರಾವಳಿ
ಮಂಗಳೂರು, ಆ.1: ಒಂದೆಡೆ ಕೊರೊನಾ 3ನೇ ಅಲೆಯ ನೆಪದಲ್ಲಿ ಕೋವಿಡ್ ನಿಯಮಗಳನ್ನು ಜಿಲ್ಲಾಡಳಿತ ಹೇರಿದ್ದು ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಆದರೆ, ಜಿಲ್ಲಾಡಳಿತದ ನಿಯಮವನ್ನೇ ಉಲ್ಲಂಘಿಸಿ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಗ್ರಹಣ ಸಮಾರಂಭ ನಡೆಸಲಾಗಿದ್ದು ಕೋವಿಡ್ ನಿಯಮ ಅನುಸರಿಸದೆ ಇನ್ನೂರಕ್ಕೂ ಹೆಚ್ಚು ಜನರು ಸೇರಿದ್ದಾರೆ.
ರಾಜಕೀಯ ಸಮಾರಂಭಗಳಿಗೆ ನಿರ್ಬಂಧ ವಿಧಿಸಿದ್ದರೂ ಕ್ಯಾರೇ ಅನ್ನದೇ ಕಾರ್ಯಕ್ರಮ ನಡೆಸಿದ್ದು ನೂರಾರು ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಕಾರ್ಯಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದು ನೂತನ ಪದಾಧಿಕಾರಿಗಳ ಪದಗ್ರಹಣಕ್ಕಾಗಿ ಸಮಾರಂಭ ಏರ್ಪಡಿಸಲಾಗಿತ್ತು. ವೇದಿಕೆಯಲ್ಲೂ ಸಾಮಾಜಿಕ ಅಂತರವಿಲ್ಲದೇ ಹತ್ತಾರು ನಾಯಕರು ಸೇರಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಎಲ್ಲ ರೀತಿಯ ಕಾರ್ಯಕ್ರಮ ನಿಷೇಧಿಸಿ ನಿನ್ನೆಯಷ್ಟೇ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ರದ್ದು ಪಡಿಸಲಾಗಿತ್ತು. ಇದೀಗ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು ಕೈ ನಾಯಕರ ವಿರುದ್ಧ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕು.
Congress leaders break covid 19 rules hundreds gathered amid no permission for political program. The program was held at Congress Bhavan at Mallikate in Mangalore.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm