ಬ್ರೇಕಿಂಗ್ ನ್ಯೂಸ್
01-08-21 04:15 pm Mangaluru Correspondent ಕರಾವಳಿ
ಮಂಗಳೂರು, ಆ.1: ಒಂದೆಡೆ ಕೊರೊನಾ 3ನೇ ಅಲೆಯ ನೆಪದಲ್ಲಿ ಕೋವಿಡ್ ನಿಯಮಗಳನ್ನು ಜಿಲ್ಲಾಡಳಿತ ಹೇರಿದ್ದು ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಆದರೆ, ಜಿಲ್ಲಾಡಳಿತದ ನಿಯಮವನ್ನೇ ಉಲ್ಲಂಘಿಸಿ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಗ್ರಹಣ ಸಮಾರಂಭ ನಡೆಸಲಾಗಿದ್ದು ಕೋವಿಡ್ ನಿಯಮ ಅನುಸರಿಸದೆ ಇನ್ನೂರಕ್ಕೂ ಹೆಚ್ಚು ಜನರು ಸೇರಿದ್ದಾರೆ.




ರಾಜಕೀಯ ಸಮಾರಂಭಗಳಿಗೆ ನಿರ್ಬಂಧ ವಿಧಿಸಿದ್ದರೂ ಕ್ಯಾರೇ ಅನ್ನದೇ ಕಾರ್ಯಕ್ರಮ ನಡೆಸಿದ್ದು ನೂರಾರು ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಕಾರ್ಯಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದು ನೂತನ ಪದಾಧಿಕಾರಿಗಳ ಪದಗ್ರಹಣಕ್ಕಾಗಿ ಸಮಾರಂಭ ಏರ್ಪಡಿಸಲಾಗಿತ್ತು. ವೇದಿಕೆಯಲ್ಲೂ ಸಾಮಾಜಿಕ ಅಂತರವಿಲ್ಲದೇ ಹತ್ತಾರು ನಾಯಕರು ಸೇರಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಎಲ್ಲ ರೀತಿಯ ಕಾರ್ಯಕ್ರಮ ನಿಷೇಧಿಸಿ ನಿನ್ನೆಯಷ್ಟೇ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ರದ್ದು ಪಡಿಸಲಾಗಿತ್ತು. ಇದೀಗ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು ಕೈ ನಾಯಕರ ವಿರುದ್ಧ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕು.
Congress leaders break covid 19 rules hundreds gathered amid no permission for political program. The program was held at Congress Bhavan at Mallikate in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm