ಬ್ರೇಕಿಂಗ್ ನ್ಯೂಸ್
01-08-21 04:15 pm Mangaluru Correspondent ಕರಾವಳಿ
ಮಂಗಳೂರು, ಆ.1: ಒಂದೆಡೆ ಕೊರೊನಾ 3ನೇ ಅಲೆಯ ನೆಪದಲ್ಲಿ ಕೋವಿಡ್ ನಿಯಮಗಳನ್ನು ಜಿಲ್ಲಾಡಳಿತ ಹೇರಿದ್ದು ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಆದರೆ, ಜಿಲ್ಲಾಡಳಿತದ ನಿಯಮವನ್ನೇ ಉಲ್ಲಂಘಿಸಿ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಗ್ರಹಣ ಸಮಾರಂಭ ನಡೆಸಲಾಗಿದ್ದು ಕೋವಿಡ್ ನಿಯಮ ಅನುಸರಿಸದೆ ಇನ್ನೂರಕ್ಕೂ ಹೆಚ್ಚು ಜನರು ಸೇರಿದ್ದಾರೆ.
ರಾಜಕೀಯ ಸಮಾರಂಭಗಳಿಗೆ ನಿರ್ಬಂಧ ವಿಧಿಸಿದ್ದರೂ ಕ್ಯಾರೇ ಅನ್ನದೇ ಕಾರ್ಯಕ್ರಮ ನಡೆಸಿದ್ದು ನೂರಾರು ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಕಾರ್ಯಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದು ನೂತನ ಪದಾಧಿಕಾರಿಗಳ ಪದಗ್ರಹಣಕ್ಕಾಗಿ ಸಮಾರಂಭ ಏರ್ಪಡಿಸಲಾಗಿತ್ತು. ವೇದಿಕೆಯಲ್ಲೂ ಸಾಮಾಜಿಕ ಅಂತರವಿಲ್ಲದೇ ಹತ್ತಾರು ನಾಯಕರು ಸೇರಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಎಲ್ಲ ರೀತಿಯ ಕಾರ್ಯಕ್ರಮ ನಿಷೇಧಿಸಿ ನಿನ್ನೆಯಷ್ಟೇ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ರದ್ದು ಪಡಿಸಲಾಗಿತ್ತು. ಇದೀಗ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು ಕೈ ನಾಯಕರ ವಿರುದ್ಧ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕು.
Congress leaders break covid 19 rules hundreds gathered amid no permission for political program. The program was held at Congress Bhavan at Mallikate in Mangalore.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm