ಬ್ರೇಕಿಂಗ್ ನ್ಯೂಸ್
01-08-21 04:15 pm Mangaluru Correspondent ಕರಾವಳಿ
ಮಂಗಳೂರು, ಆ.1: ಒಂದೆಡೆ ಕೊರೊನಾ 3ನೇ ಅಲೆಯ ನೆಪದಲ್ಲಿ ಕೋವಿಡ್ ನಿಯಮಗಳನ್ನು ಜಿಲ್ಲಾಡಳಿತ ಹೇರಿದ್ದು ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಆದರೆ, ಜಿಲ್ಲಾಡಳಿತದ ನಿಯಮವನ್ನೇ ಉಲ್ಲಂಘಿಸಿ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಗ್ರಹಣ ಸಮಾರಂಭ ನಡೆಸಲಾಗಿದ್ದು ಕೋವಿಡ್ ನಿಯಮ ಅನುಸರಿಸದೆ ಇನ್ನೂರಕ್ಕೂ ಹೆಚ್ಚು ಜನರು ಸೇರಿದ್ದಾರೆ.




ರಾಜಕೀಯ ಸಮಾರಂಭಗಳಿಗೆ ನಿರ್ಬಂಧ ವಿಧಿಸಿದ್ದರೂ ಕ್ಯಾರೇ ಅನ್ನದೇ ಕಾರ್ಯಕ್ರಮ ನಡೆಸಿದ್ದು ನೂರಾರು ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಕಾರ್ಯಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದು ನೂತನ ಪದಾಧಿಕಾರಿಗಳ ಪದಗ್ರಹಣಕ್ಕಾಗಿ ಸಮಾರಂಭ ಏರ್ಪಡಿಸಲಾಗಿತ್ತು. ವೇದಿಕೆಯಲ್ಲೂ ಸಾಮಾಜಿಕ ಅಂತರವಿಲ್ಲದೇ ಹತ್ತಾರು ನಾಯಕರು ಸೇರಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಎಲ್ಲ ರೀತಿಯ ಕಾರ್ಯಕ್ರಮ ನಿಷೇಧಿಸಿ ನಿನ್ನೆಯಷ್ಟೇ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ರದ್ದು ಪಡಿಸಲಾಗಿತ್ತು. ಇದೀಗ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು ಕೈ ನಾಯಕರ ವಿರುದ್ಧ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕು.
Congress leaders break covid 19 rules hundreds gathered amid no permission for political program. The program was held at Congress Bhavan at Mallikate in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am