ಬ್ರೇಕಿಂಗ್ ನ್ಯೂಸ್
03-08-21 06:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ನೂತನ ಸಿಎಂ ಬೊಮ್ಮಾಯಿ ಸಂಪುಟಕ್ಕೆ ಹೊಸಬರು ಸೇರಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆ. ಇನ್ನೆರಡು ದಿನದಲ್ಲಿ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಾರೆ ಎನ್ನುವ ಮಾಹಿತಿಗಳೂ ಇವೆ. ಈ ನಡುವೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಮಂತ್ರಿಸ್ಥಾನ ಕೊಡಬೇಕು ಎಂಬ ಕೂಗು ಜೋರಾಗಿದೆ. ಹಾಲಾಡಿ ಅಭಿಮಾನಿಗಳು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಬಹಿರಂಗ ಪತ್ರ ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಬೆಂಗಳೂರಿಗೆ ಹೋಗಿ ಯಾರದ್ದೋ ಕೈಕಾಲು ಹಿಡಿದು ಮಂತ್ರಿ ಸ್ಥಾನವನ್ನು ಕೇಳುವುದಿಲ್ಲ. ನನ್ನ ಉಸಿರು ಇದ್ದರೆ ನಾನು ಕಾಡಿಬೇಡಿ ಮಂತ್ರಿಯಾಗುವುದಿಲ್ಲ ಎಂದು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಈ ನಡುವೆ ಹಾಲಾಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಗರಿಗೆ ಪತ್ರ ಅಭಿಯಾನ ನಡೆಸುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಹಳೆಯ ಎಲ್ಲಾ ನೆನಪುಗಳನ್ನು ಕೆದಕಿದ್ದಾರೆ.


ಬೆಂಗಳೂರಿಗೆ ಕರೆಸಿ ಮಂತ್ರಿ ಸ್ಥಾನ ತಪ್ಪಿದಾಗ ಯಡಿಯೂರಪ್ಪ ಮಾತುಕತೆ ಮಾಡಿ ಸಿಹಿಸುದ್ದಿ ಕೊಡುವುದಾಗಿ ಹೇಳಿದ್ದರು. ಅದನ್ನು ಯಾಕೆ ಮರೆತಿದ್ದೀರಿ? ನೀವು ಕಿಂಗ್ ಮೇಕರ್. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದೀರಿ. ಹಾಲಾಡಿಯನ್ನು ಮಂತ್ರಿ ಮಾಡಬೇಕೆಂದು ಅನ್ನಿಸಲಿಲ್ಲವಾ? ಕೋಟಾ ಶ್ರೀನಿವಾಸ ಪೂಜಾರಿಗೆ ಸ್ಥಾನ ಕೊಟ್ಟದ್ದು ಯಾಕೆ ಎಂಬುದನ್ನು ನಾವು ಇನ್ನೂ ಮರೆತಿಲ್ಲ. ಶೋಭಾ ಕರಂದ್ಲಾಜೆಗೆ ಹಾಲಾಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ಕೊಡಿಸಿದ್ದು ನಿಮಗೆ ಮರೆತುಹೋಯಿತೆ? ಹಾಲಾಡಿ ಜಿಲ್ಲೆಯ ಏಕೈಕ ಶಾಸಕರಾಗಿದ್ದ ದಿನಗಳನ್ನು ನೀವು ಮರೆಯಬೇಡಿ.
ಪಕ್ಷೇತರರಾಗಿದ್ದಾಗ ನಿರ್ಮಲಾ ಸೀತಾರಾಮನ್ ಗೆ ಮತ ಹಾಕಿದ್ದು ನಿಮಗೆ ನೆನಪಿಲ್ಲವೇ? ಹಾಲಾಡಿಗೆ ಸಚಿವ ಸ್ಥಾನ ಸಿಗದಿದ್ದರೆ ನಮಗೆ ಬೇಸರವಿಲ್ಲ. ಆದರೆ ಲಕ್ಷಾಂತರ ಮಂದಿಯ ಶಾಪ ನಿಮಗೆ ತಟ್ಟಲಿದೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಕಡೆ ಓಡಾಡುತ್ತಿದೆ. ಕೆಲವು ಅಭಿಮಾನಿಗಳು ಪ್ರಿಂಟ್ ತೆಗೆದು ಯಡಿಯೂರಪ್ಪನವರಿಗೆ ಪೋಸ್ಟ್ ಮಾಡುತ್ತಿದ್ದಾರೆ.
ಡಿಯರ್ ಬಿಜೆಪಿ, ಮಂತ್ರಿಯಾಗಲೇಬೇಕು ಹಾಲಾಡಿ, ಇದು ನಮ್ಮ ಒಡಲ ನುಡಿ, ನೀವದನ್ನು ನಡೆಸಿಕೊಡಿ ಎನ್ನುವ ಟ್ಯಾಗ್ ಲೈನಲ್ಲಿ ಮಾಡಿರುವ ಅಭಿಯಾನ ಟೀಮ್ ಹಾಲಾಡಿ, ಥೀಮ್ ಹಾಲಾಡಿ ಹೆಸರಲ್ಲಿ ಭಾರೀ ವೈರಲ್ ಆಗಿದೆ.
Kundapur MLA Halady Srinivas Shetty fans have started twitter campaign stating has BJP party forgotten the good works of our leader on twitter.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm