ಗಡಿಭಾಗದಲ್ಲಿ ನಿರ್ಬಂಧ ಹಿನ್ನೆಲೆ ; ಮಂಗಳೂರು ವಿವಿ ಪರೀಕ್ಷೆ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ 

03-08-21 08:48 pm       Mangaluru Correspondent   ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಪರೀಕ್ಷೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ರದ್ದುಪಡಿಸಿ, ಮುಂದಿನ ಆದೇಶದ ವರೆಗೆ ತರಗತಿ ಮತ್ತು ಪರೀಕ್ಷೆಗಳನ್ನು ಮುಂದೂಡುವಂತೆ ಸೂಚಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. 

ಮಂಗಳೂರು, ಆಗಸ್ಟ್ 3: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಪರೀಕ್ಷೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ರದ್ದುಪಡಿಸಿ, ಮುಂದಿನ ಆದೇಶದ ವರೆಗೆ ತರಗತಿ ಮತ್ತು ಪರೀಕ್ಷೆಗಳನ್ನು ಮುಂದೂಡುವಂತೆ ಸೂಚಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. 

ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುತ್ತಿದ್ದು ಕೇರಳ ಗಡಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿರುವುದರಿಂದ ಕೋವಿಡ್ ಪ್ರಸರಣ ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಇದರ ಬಗ್ಗೆ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ. ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿರುವುದರಿಂದ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. 

ಪರೀಕ್ಷೆ ನಡೆಸುವುದು, ಅದಕ್ಕೆ ಹಾಜರಾಗುವುದು ಗಡಿಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಳೆದ ಸೋಮವಾರದಿಂದ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

Mangalore University cancels ongoing exams due to border issues in Talapady after raising in covid cases.  Dakshina Kannada has strengthened checking at Talapady check-post to allow the entry of only those with RT-PCR negative certificate taken within 72 hours, in the wake of increasing COVID-19 cases in Kerala. Even those who have completed their two doses of COVID-19 vaccination have not been exempted from this rule.