ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.







ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm