ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.







ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm