ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.
ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm