ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm