ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm