ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm