ಬ್ರೇಕಿಂಗ್ ನ್ಯೂಸ್
06-08-21 11:08 pm Mangaluru Correspondent ಕರಾವಳಿ
ಉಳ್ಳಾಲ, ಆ.6: ಅನಗತ್ಯ ವಿಚಾರಕ್ಕೆ ಪತ್ರಿಕಾಗೋಷ್ಟಿಗಳನ್ನು ಕರೆಯುವ ಶಾಸಕ ಯು.ಟಿ.ಖಾದರ್ ಅವರು ತನ್ನ ಕ್ಷೇತ್ರದ ಅಂಗಳದಲ್ಲೇ ನಡೆಯುತ್ತಿರುವ ಐಸಿಸ್ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಪ್ರಶ್ನಿಸಿದ್ದಾರೆ.
ಕಾಪಿಕಾಡಿನ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಬುಧವಾರ ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರ್ರಹ್ಮಾನ್ ಬಾಷಾ ಅವರ ಮನೆಗೆ ಎನ್ ಐಎ ತಂಡ ದಾಳಿ ನಡೆಸಿದ್ದು ಸಿರಿಯಾದ ಐಸಿಸ್ ಜೊತೆ ಸಂಪರ್ಕದ ಆರೋಪದಲ್ಲಿ ಬಾಷಾ ಅವರ ಕಿರಿಯ ಮಗ ಅಮ್ಮರ್ ಅಬ್ದುಲ್ ರಹ್ಮಾನ್ ಮತ್ತು ಸೊಸೆ ದೀಪ್ತಿ ಮಾರ್ಲರನ್ನು ವಶಕ್ಕೆ ಪಡೆದಿದ್ದು ಈ ಬಗ್ಗೆ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಏಕೆ ಮಾತನಾಡೋದಿಲ್ಲವೆಂದು ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ನಡೆದ ದಾಳಿಯ ವಿರುದ್ಧ ಈವರೆಗೆ ಖಾದರ್ ತುಟಿಕ್ ಪಿಟಿಕ್ ಮಾತಾಡಿಲ್ಲ. ಆ ಮೂಲಕ ಉಳ್ಳಾಲದಿಂದ ಕಾಶ್ಮೀರದ ವರೆಗೆ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಗಾವಲಿದೆಯೇ ಎಂದು ಸಂಶಯ ಬಂದಿದೆ. ಈ ಹಿಂದೆಯೂ ಉಳ್ಳಾಲದಲ್ಲಿ ನಡೆದ ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಕ್ಷೇತ್ರದ ಶಾಸಕರಾಗಲಿ ಯಾವುದೇ ಕಾಂಗ್ರೆಸ್ ನಾಯಕರು ಕೂಡಾ ಸೊಲ್ಲೆತ್ತಿಲ್ಲ. ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಲವ್ ಜಿಹಾದ್ ಮೂಲಕ ಮತಾಂತರಗೊಂಡಿದ್ದು ಆಕೆಯನ್ನು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಲಾಗಿದೆ. ಉಳ್ಳಾಲದ ಅನೇಕ ಶಿಕ್ಷಣ ಸಂಸ್ಥೆಗಳೂ ಭಯೋತ್ಪಾದನೆಗೆ ಬಲಿಯಾಗಿವೆ ಎಂದು ಅವರು ಆರೋಪಿಸಿದರು.


ಅನಗತ್ಯ ವಿಚಾರಗಳಿಗೆ ಪತ್ರಿಕಾಗೋಷ್ಟಿಗಳನ್ನು ಕರೆಯುವ ಶಾಸಕ ಖಾದರ್ ಅವರು ಉಳ್ಳಾಲದಲ್ಲಿ ಬೇರು ಬಿಟ್ಟಿರುವ ಭಯೋತ್ಪಾದನೆಯ ವಿರುದ್ಧ ಮಾತನಾಡಬೇಕಿದೆ ಎಂದರು.
ದಿ ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಮಾತನಾಡಿ ಮಾಜಿ ಶಾಸಕರ ವಿದ್ಯಾವಂತ ಕುಟುಂಬದವರೇ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿರುವುದು ದೇಶದ ಭದ್ರತೆಗೆ ಬಂದಿರುವ ಮಹಾ ಕಂಟಕ. ಹಿಂದೂ ಯುವತಿಯನ್ನು ಮತಾಂತರಗೊಳಿಸಿ ಭಯೋತ್ಪಾದನೆಗೆ ತಳ್ಳಿದ್ದು ಲವ್ ಜಿಹಾದ್ ಅಲ್ಲದೆ ಮತ್ತೇನು. ಉಳ್ಳಾಲದ ಅತ್ಯಂತ ಶ್ರೀಮಂತರು, ವಿದ್ಯಾವಂತರ ಮನೆಯೇ ಇಂದು ಭಯೋತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಅವರು ನಡೆಸುತ್ತಿರುವ ವಿದ್ಯಾಸಂಸ್ಥೆಗಳ ಮೇಲೆಯೂ ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸುವ ಅಗತ್ಯವಿದೆ ಎಂದರು.

ದೇಶದ ಭದ್ರತೆಯ ವಿಚಾರದಲ್ಲಿ ಬಿಜೆಪಿ ಯಾರೊಂದಿಗೂ ರಾಜಿ ಮಾಡೋದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಷಾ ಅವರು ದೇಶದ ಮೂಲೆ, ಮೂಲೆಯಲ್ಲಿ ಅಡಗಿರುವ ಭಯೋತ್ಪಾದಕರ ಜಾಲಾಡುತ್ತಿರುವ ಕಾರ್ಯವೈಖರಿಯೇ ಅದಕ್ಕೆ ನಿದರ್ಶನ ಎಂದರು.
ಬಿಜೆಪಿ ಕ್ಷೇತ್ರ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಆನಂದ ಶೆಟ್ಟಿ, ಹೇಮಂತ್ ಶೆಟ್ಟಿ ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
NIA raid and arrest in Ullal Mangalore BJP slams silence of U T Khader.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm