ಬ್ರೇಕಿಂಗ್ ನ್ಯೂಸ್
06-08-21 11:08 pm Mangaluru Correspondent ಕರಾವಳಿ
ಉಳ್ಳಾಲ, ಆ.6: ಅನಗತ್ಯ ವಿಚಾರಕ್ಕೆ ಪತ್ರಿಕಾಗೋಷ್ಟಿಗಳನ್ನು ಕರೆಯುವ ಶಾಸಕ ಯು.ಟಿ.ಖಾದರ್ ಅವರು ತನ್ನ ಕ್ಷೇತ್ರದ ಅಂಗಳದಲ್ಲೇ ನಡೆಯುತ್ತಿರುವ ಐಸಿಸ್ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಪ್ರಶ್ನಿಸಿದ್ದಾರೆ.
ಕಾಪಿಕಾಡಿನ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಬುಧವಾರ ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರ್ರಹ್ಮಾನ್ ಬಾಷಾ ಅವರ ಮನೆಗೆ ಎನ್ ಐಎ ತಂಡ ದಾಳಿ ನಡೆಸಿದ್ದು ಸಿರಿಯಾದ ಐಸಿಸ್ ಜೊತೆ ಸಂಪರ್ಕದ ಆರೋಪದಲ್ಲಿ ಬಾಷಾ ಅವರ ಕಿರಿಯ ಮಗ ಅಮ್ಮರ್ ಅಬ್ದುಲ್ ರಹ್ಮಾನ್ ಮತ್ತು ಸೊಸೆ ದೀಪ್ತಿ ಮಾರ್ಲರನ್ನು ವಶಕ್ಕೆ ಪಡೆದಿದ್ದು ಈ ಬಗ್ಗೆ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಏಕೆ ಮಾತನಾಡೋದಿಲ್ಲವೆಂದು ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ನಡೆದ ದಾಳಿಯ ವಿರುದ್ಧ ಈವರೆಗೆ ಖಾದರ್ ತುಟಿಕ್ ಪಿಟಿಕ್ ಮಾತಾಡಿಲ್ಲ. ಆ ಮೂಲಕ ಉಳ್ಳಾಲದಿಂದ ಕಾಶ್ಮೀರದ ವರೆಗೆ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಗಾವಲಿದೆಯೇ ಎಂದು ಸಂಶಯ ಬಂದಿದೆ. ಈ ಹಿಂದೆಯೂ ಉಳ್ಳಾಲದಲ್ಲಿ ನಡೆದ ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಕ್ಷೇತ್ರದ ಶಾಸಕರಾಗಲಿ ಯಾವುದೇ ಕಾಂಗ್ರೆಸ್ ನಾಯಕರು ಕೂಡಾ ಸೊಲ್ಲೆತ್ತಿಲ್ಲ. ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಲವ್ ಜಿಹಾದ್ ಮೂಲಕ ಮತಾಂತರಗೊಂಡಿದ್ದು ಆಕೆಯನ್ನು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಲಾಗಿದೆ. ಉಳ್ಳಾಲದ ಅನೇಕ ಶಿಕ್ಷಣ ಸಂಸ್ಥೆಗಳೂ ಭಯೋತ್ಪಾದನೆಗೆ ಬಲಿಯಾಗಿವೆ ಎಂದು ಅವರು ಆರೋಪಿಸಿದರು.


ಅನಗತ್ಯ ವಿಚಾರಗಳಿಗೆ ಪತ್ರಿಕಾಗೋಷ್ಟಿಗಳನ್ನು ಕರೆಯುವ ಶಾಸಕ ಖಾದರ್ ಅವರು ಉಳ್ಳಾಲದಲ್ಲಿ ಬೇರು ಬಿಟ್ಟಿರುವ ಭಯೋತ್ಪಾದನೆಯ ವಿರುದ್ಧ ಮಾತನಾಡಬೇಕಿದೆ ಎಂದರು.
ದಿ ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಮಾತನಾಡಿ ಮಾಜಿ ಶಾಸಕರ ವಿದ್ಯಾವಂತ ಕುಟುಂಬದವರೇ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿರುವುದು ದೇಶದ ಭದ್ರತೆಗೆ ಬಂದಿರುವ ಮಹಾ ಕಂಟಕ. ಹಿಂದೂ ಯುವತಿಯನ್ನು ಮತಾಂತರಗೊಳಿಸಿ ಭಯೋತ್ಪಾದನೆಗೆ ತಳ್ಳಿದ್ದು ಲವ್ ಜಿಹಾದ್ ಅಲ್ಲದೆ ಮತ್ತೇನು. ಉಳ್ಳಾಲದ ಅತ್ಯಂತ ಶ್ರೀಮಂತರು, ವಿದ್ಯಾವಂತರ ಮನೆಯೇ ಇಂದು ಭಯೋತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಅವರು ನಡೆಸುತ್ತಿರುವ ವಿದ್ಯಾಸಂಸ್ಥೆಗಳ ಮೇಲೆಯೂ ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸುವ ಅಗತ್ಯವಿದೆ ಎಂದರು.

ದೇಶದ ಭದ್ರತೆಯ ವಿಚಾರದಲ್ಲಿ ಬಿಜೆಪಿ ಯಾರೊಂದಿಗೂ ರಾಜಿ ಮಾಡೋದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಷಾ ಅವರು ದೇಶದ ಮೂಲೆ, ಮೂಲೆಯಲ್ಲಿ ಅಡಗಿರುವ ಭಯೋತ್ಪಾದಕರ ಜಾಲಾಡುತ್ತಿರುವ ಕಾರ್ಯವೈಖರಿಯೇ ಅದಕ್ಕೆ ನಿದರ್ಶನ ಎಂದರು.
ಬಿಜೆಪಿ ಕ್ಷೇತ್ರ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಆನಂದ ಶೆಟ್ಟಿ, ಹೇಮಂತ್ ಶೆಟ್ಟಿ ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
NIA raid and arrest in Ullal Mangalore BJP slams silence of U T Khader.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm