ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm