ಬ್ರೇಕಿಂಗ್ ನ್ಯೂಸ್
09-08-21 11:04 am Mangaluru Correspondent ಕರಾವಳಿ
ಉಳ್ಳಾಲ, ಆಗಸ್ಟ್ 9: ಕೇರಳ ನಿವಾಸಿಗಳನ್ನು ಕೋವಿಡ್ ನೆಪದಲ್ಲಿ ನಿರ್ಬಂಧಿಸಿರುವ ಕರ್ನಾಟಕ ಸರಕಾರದ ಕ್ರಮವನ್ನು ಖಂಡಿಸಿ ಗಡಿಭಾಗ ತಲಪಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಭಾರೀ ಪ್ರತಿಭಟನೆ ನಡೆಸಲಾಗಿದೆ.
ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ. ಜನಸಾಮಾನ್ಯರನ್ನು ಬೀದಿಗೆ ತಳ್ಳಿದೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಮಧ್ಯ ಪ್ರವೇಶ ಮಾಡಿ, ಗಡಿ ಸಮಸ್ಯೆ ಇತ್ಯರ್ಥ ಪಡುಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
ಈ ವೇಳೆ, ಮಾತನಾಡಿದ ಕಾಂಗ್ರೆಸ್ ಮುಖಂಡ ಹರ್ಷಾದ್ ವರ್ಕಾಡಿ, ಹಿಂದೆಯೂ ಗಡಿ ಬಂದ್ ಮಾಡಿದಾಗ ನಾವು ಸಹಕಾರ ನೀಡಿದ್ದೇವೆ. ಆದರೆ, ಈಗ ನಾವು ಒಪ್ಪಲ್ಲ. ಕೇಂದ್ರ ಸರಕಾರವೇ ಎರಡು ಡೋಸ್ ಲಸಿಕೆ ಪಡೆದವರಿಗೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಹೇಳಿದೆ. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದ ಕೇರಳದ ಗಡಿ ನಿವಾಸಿಗಳನ್ನು ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಮತ್ತು ಕೇರಳದ ಉಭಯ ಸರಕಾರಗಳ ನಿರ್ಲಕ್ಷ್ಯ ಧೋರಣೆ ವಿರುದ್ಧ ಯುಡಿವೈಎಫ್ ಮಂಜೇಶ್ವರ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೋವಿಡ್ ಲಸಿಕೆಯ ವರದಿಯನ್ನ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಲಸಿಕೆ ಪಡೆದರೂ ಅದಕ್ಕೆ ಬೆಲೆಯಿಲ್ಲ ಎಂದಾದ್ರೆ ಈ ಲಸಿಕೆ ಯಾಕೆ ಇರಬೇಕು. ಈ ವರದಿ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದರು.
ಕೆಎಂಸಿಸಿ ಮುಖಂಡ ಬಾಬಾ ಉದ್ಯಾವರ, ಮುಸ್ಲಿಂ ಲೀಗ್ ಮಂಜೇಶ್ವರ ಪಂಚಾಯತ್ ಸಮಿತಿ ಅಧ್ಯಕ್ಷ ಸೈಫುಲ್ಲಾ ತಂಙಳ್, ಯೂತ್ ಕಾಂಗ್ರೆಸ್ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷ ಇರ್ಷಾದ್ ಮಂಜೇಶ್ವರ, ಮಂಜೇಶ್ವರ ಗ್ರಾ.ಪಂ ಸದಸ್ಯರಾದ ಮುಸ್ತಫಾ ಉದ್ಯಾವರ, ಪ್ರಮುಖರಾದ ಸಿದ್ದೀಕ್ ಮಂಜೇಶ್ವರ,ಡೆರಿಕ್ ಮೊಂತೇರೊ, ಹನೀಫ್ ಪಡಿನ್ಯಾರ್, ಎಂ.ಪಿ ಬದ್ರುದ್ದೀನ್ ತುಮಿನಾಡ್ ಮೊದಲಾದವರು ಉಪಸ್ಥಿತರಿದ್ದರು.
ಆನಂತರ ಆಡಳಿತಾರೂಢ ಎಲ್ ಡಿಎಫ್ ಪಕ್ಷದ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲೂ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸಿಪಿಐ ಕಾಸರಗೋಡು ಜಿಲ್ಲಾ ನಿರ್ವಾಹಕ ಸಮಿತಿ ಸದಸ್ಯ ಬಿ.ವಿ ರಾಜನ್ ಪ್ರತಿಭಟನೆಯಲ್ಲಿ ಮಾತನಾಡಿದರು. ಇದೇ ವೇಳೆ, ಕಾಸರಗೋಡು ಜಿಲ್ಲಾಧಿಕಾರಿ ಸ್ವಾಗತ್ ಭಂಡಾರಿ ಗಡಿಭಾಗ ತಲಪಾಡಿಗೆ ಭೇಟಿಯಿತ್ತು ಪರಿಶೀಲನೆ ನಡೆಸಿದರು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಬಳಿ ತಮ್ಮ ಅಹವಾಲು ತೋಡಿಕೊಂಡರು.
Video:
LDF and UDF party protest at talapady border Kasaragod DC Bhandari Swagath Intervenes
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm