ನಂತೂರು ಬಳಿ ಹಿಟ್ ಅಂಡ್ ರನ್ ; ಸ್ಕೂಟರ್ ಮೇಲೆ ಹರಿದು ಲಾರಿ ಪರಾರಿ, ಸವಾರ ಬಸ್ ಚಾಲಕ ಸ್ಥಳದಲ್ಲೇ ಸಾವು ! 

10-08-21 11:44 pm       Mangaluru Correspondent   ಕರಾವಳಿ

ನಗರದ ಬಿಕರ್ನಕಟ್ಟೆ ಬಳಿ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರು, ಆಗಸ್ಟ್ 10: ನಗರದ ಬಿಕರ್ನಕಟ್ಟೆ ಬಳಿ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಉಳಾಯಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ ದಯಾನಂದ್ (35) ಮೃತರು ಎಂದು ಗುರುತಿಸಲಾಗಿದೆ.

ದಯಾನಂದ್ ಅವರು ಕೆಲಸ ಮುಗಿಸಿ ನಂತೂರಿನಿಂದ ವಾಮಂಜೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಬಿಕರ್ನಕಟ್ಟೆ ಜಂಕ್ಷನ್ ನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಲಾರಿಯು ಸ್ಕೂಟರ್‌ ಸವಾರನನ್ನು ದೂರಕ್ಕೆ ಎಳೆದುಕೊಂಡು ಹೋಗಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದು, ಸಾರ್ವಜನಿಕರು ಕೈಕಂಬ ಬಳಿ ತಡೆದು ಹಿಡಿದಿದ್ದಾರೆ. ಲಾರಿಯನ್ನು ಚಾಲಕನ ಸಹಿತ ವಶಕ್ಕೆ ಪಡೆಯಲಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೂರ್ವ (ಕದ್ರಿ) ಸಂಚಾರ ಠಾಣೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ.

Mangalore Hit and run accident Biker killed at Nantoor after truck rams. The deceased has been identified as Dayanand (35). It is said Dayanand was a Bus driver.