ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm