ದಕ್ಷಿಣ ಕನ್ನಡ ಜಿಲ್ಲೆಗೆ ಇವತ್ತೂ ಕೊರೋನಾ ಶಾಕ್: 377 ಮಂದಿಗೆ ಸೋಂಕು, 9 ಸಾವು

05-09-20 07:42 pm       Dhruthi Anchan - Correspondent   ಕರಾವಳಿ

ದಕ್ಷಿಣ ಕನ್ನಡದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಪ್ರಕರಣ. ಇಂದು ಮತ್ತೆ 377 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟರೆ, ಸಾವಿನ ಸಂಖ್ಯೆ 400ಕ್ಕೆ ಏರಿಕೆ

ಮಂಗಳೂರು, ಸೆಪ್ಟೆಂಬರ್.5 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇಂದು ಬರೋಬ್ಬರಿ 377 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 9 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 400ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 311 ಮಂದಿ ಗುಣಮುಖರಾಗಿದ್ದಾರೆ.

ಮಂಗಳೂರಿನಲ್ಲಿ 192, ಬಂಟ್ವಾಳದಲ್ಲಿ 45, ಪುತ್ತೂರಿನಲ್ಲಿ 64, ಸುಳ್ಯದಲ್ಲಿ 37, ಬೆಳ್ತಂಗಡಿಯಲ್ಲಿ 20, ಹಾಗೂ ಹೊರ ಜಿಲ್ಲೆಯ 19 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ. 

ಇಂದು ಪತ್ತೆಯಾದ ಸೋಂಕಿತರ ಪೈಕಿ 50 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, ಜ್ವರದ ಲಕ್ಷಣವಿರುವ 197 ಮಂದಿಗೆ ಕೊರೊನ ಪತ್ತೆಯಾಗಿದೆ.

Join our WhatsApp group for latest news updates