ಬ್ರೇಕಿಂಗ್ ನ್ಯೂಸ್
12-08-21 11:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಸರಕಾರಿ ಜಾಗದಲ್ಲಿ ಹೋದಲ್ಲಿ ಬಂದಲ್ಲಿ ಗಾರ್ಡ್ ಆಫ್ ಹಾನರ್ ಕೊಡುವುದು, ತಗೊಳ್ಳುವುದು ನಂಗೆ ಇಷ್ಟವಾಗಲ್ಲ. ಅದು ಬೇಡ ಎಂಬುದು ನನ್ನ ಭಾವನೆ. ಈ ಬಗ್ಗೆ ಬೆಂಗಳೂರಿಗೆ ಹೋದ ತಕ್ಷಣ ಆದೇಶವನ್ನು ಹೊರಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಿಷ್ಟಾಚಾರ ಪ್ರಕಾರ ಒಂದು ಕಡೆ ಎಲ್ಲಾದ್ರೂ ಅದರಲ್ಲೂ ಪೊಲೀಸ್ ಸಮಾರಂಭದಲ್ಲಿ ಮಾತ್ರ ಗೌರವ ವಂದನೆ ಕೊಟ್ಟರೆ ಸಾಕು. ಅದು ಬಿಟ್ಟು ಸಿಕ್ಕಲ್ಲಿ ಎಲ್ಲಾ ಗಾರ್ಡ್ ಆಫ್ ಹಾನರ್ ಬೇಡ ಎಂದು ಹೇಳುವ ಮೂಲಕ ತಮ್ಮ ನೈಜ ಸಮಾಜವಾದಿ ಭಾವನೆಯನ್ನು ತೆರೆದಿಟ್ಟಿದ್ದಾರೆ.
ಅಲ್ಲದೆ, ಯಾರೂ ಕಟೌಟ್ ಹೋರ್ಡಿಂಗ್ ಹಾಕೋದು ಬೇಡ. ಯಾರು ಕೂಡ ಶುಭಕೋರಲು ಹೋರ್ಡಿಂಗ್ ಹಾಕಬೇಡಿ. ನನ್ನ ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ನಾನು ಮನವಿ ಮಾಡುತ್ತೇನೆ. ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದರು.

ಉಡುಪಿಯಲ್ಲಿ ಪುಷ್ಪ ವ್ಯಾಪಾರಿಗಳ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ಹೇಳಿದ ಅವರು, ಹೂವಿನ ವ್ಯಾಪಾರಿಗಳಿಗೆ ತೊಂದರೆ ಕೊಡಬೇಕು ಎಂಬುದು ನನ್ನ ಉದ್ದೇಶ ಅಲ್ಲ. ಖಾಸಗಿಯಾಗಿ ಅವರು ಹೂವಿನ ವ್ಯಾಪಾರವನ್ನು ಬೇಕಾದಷ್ಟು ಮಾಡಬಹುದು. ಅದಕ್ಕೆ ಬೇಡಿಕೆಯೂ ಇರುತ್ತದೆ. ಸರಕಾರಿ ಕಾರ್ಯಕ್ರಮದಲ್ಲಿ ಮಾತ್ರ ಹೂಗುಚ್ಚ, ಹಾರ, ತುರಾಯಿ ಬೇಡ ಎಂದಿದ್ದೇನೆ ಎಂದು ಸೂಚ್ಯವಾಗಿ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಯಾವುದೇ ಮ್ಯಾಜಿಕ್ಕನ್ನು ಮಾಡುತ್ತಿಲ್ಲ. ಅಸಮಾಧಾನ ಏನೇ ಇದ್ದರೂ ಎಲ್ಲರೊಂದಿಗೂ ಮಾತಾಡುತ್ತೇನೆ. ಪ್ರೀತಿ ಮತ್ತು ವಿಶ್ವಾಸವೇ ನಾನು ಮಾಡುತ್ತಿರುವ ಮ್ಯಾಜಿಕ್ ಅಷ್ಟೇ ಎಂದು ಹೇಳಿದರು.
ಕೋವಿಡ್ ಸಂದರ್ಭ 10,0000 ಸಾವು ಆಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಎಲ್ಲಾ ಸಾವುಗಳ ಬಗ್ಗೆ ಸರಕಾರದ ದಾಖಲೆಯಲ್ಲಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರದ ದಾಖಲೆಯಲ್ಲಿ ಸಾವಿನ ಬಗ್ಗೆ ಡಾಟಾ ಇದೆ. ಅವರು ತಮ್ಮ ಹೇಳಿಕೆಗೆ ಆಧಾರ ಕೊಟ್ಟರೆ ಪರಿಶೀಲಿಸುತ್ತೇವೆ. ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭಾ ಅಧಿವೇಶನ ನಡೆಯಲಿದ್ದು ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
After doing away with the practice of giving bouquets, garlands, and memorabilia at government events, Karnataka Chief Minister Basavaraj S Bommai said on Thursday that he would soon issue an order banning guard of honour given to him and other ministers at every district and public places during their visits.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm