ಬ್ರೇಕಿಂಗ್ ನ್ಯೂಸ್
12-08-21 11:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಸರಕಾರಿ ಜಾಗದಲ್ಲಿ ಹೋದಲ್ಲಿ ಬಂದಲ್ಲಿ ಗಾರ್ಡ್ ಆಫ್ ಹಾನರ್ ಕೊಡುವುದು, ತಗೊಳ್ಳುವುದು ನಂಗೆ ಇಷ್ಟವಾಗಲ್ಲ. ಅದು ಬೇಡ ಎಂಬುದು ನನ್ನ ಭಾವನೆ. ಈ ಬಗ್ಗೆ ಬೆಂಗಳೂರಿಗೆ ಹೋದ ತಕ್ಷಣ ಆದೇಶವನ್ನು ಹೊರಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಿಷ್ಟಾಚಾರ ಪ್ರಕಾರ ಒಂದು ಕಡೆ ಎಲ್ಲಾದ್ರೂ ಅದರಲ್ಲೂ ಪೊಲೀಸ್ ಸಮಾರಂಭದಲ್ಲಿ ಮಾತ್ರ ಗೌರವ ವಂದನೆ ಕೊಟ್ಟರೆ ಸಾಕು. ಅದು ಬಿಟ್ಟು ಸಿಕ್ಕಲ್ಲಿ ಎಲ್ಲಾ ಗಾರ್ಡ್ ಆಫ್ ಹಾನರ್ ಬೇಡ ಎಂದು ಹೇಳುವ ಮೂಲಕ ತಮ್ಮ ನೈಜ ಸಮಾಜವಾದಿ ಭಾವನೆಯನ್ನು ತೆರೆದಿಟ್ಟಿದ್ದಾರೆ.
ಅಲ್ಲದೆ, ಯಾರೂ ಕಟೌಟ್ ಹೋರ್ಡಿಂಗ್ ಹಾಕೋದು ಬೇಡ. ಯಾರು ಕೂಡ ಶುಭಕೋರಲು ಹೋರ್ಡಿಂಗ್ ಹಾಕಬೇಡಿ. ನನ್ನ ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ನಾನು ಮನವಿ ಮಾಡುತ್ತೇನೆ. ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದರು.

ಉಡುಪಿಯಲ್ಲಿ ಪುಷ್ಪ ವ್ಯಾಪಾರಿಗಳ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ಹೇಳಿದ ಅವರು, ಹೂವಿನ ವ್ಯಾಪಾರಿಗಳಿಗೆ ತೊಂದರೆ ಕೊಡಬೇಕು ಎಂಬುದು ನನ್ನ ಉದ್ದೇಶ ಅಲ್ಲ. ಖಾಸಗಿಯಾಗಿ ಅವರು ಹೂವಿನ ವ್ಯಾಪಾರವನ್ನು ಬೇಕಾದಷ್ಟು ಮಾಡಬಹುದು. ಅದಕ್ಕೆ ಬೇಡಿಕೆಯೂ ಇರುತ್ತದೆ. ಸರಕಾರಿ ಕಾರ್ಯಕ್ರಮದಲ್ಲಿ ಮಾತ್ರ ಹೂಗುಚ್ಚ, ಹಾರ, ತುರಾಯಿ ಬೇಡ ಎಂದಿದ್ದೇನೆ ಎಂದು ಸೂಚ್ಯವಾಗಿ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಯಾವುದೇ ಮ್ಯಾಜಿಕ್ಕನ್ನು ಮಾಡುತ್ತಿಲ್ಲ. ಅಸಮಾಧಾನ ಏನೇ ಇದ್ದರೂ ಎಲ್ಲರೊಂದಿಗೂ ಮಾತಾಡುತ್ತೇನೆ. ಪ್ರೀತಿ ಮತ್ತು ವಿಶ್ವಾಸವೇ ನಾನು ಮಾಡುತ್ತಿರುವ ಮ್ಯಾಜಿಕ್ ಅಷ್ಟೇ ಎಂದು ಹೇಳಿದರು.
ಕೋವಿಡ್ ಸಂದರ್ಭ 10,0000 ಸಾವು ಆಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಎಲ್ಲಾ ಸಾವುಗಳ ಬಗ್ಗೆ ಸರಕಾರದ ದಾಖಲೆಯಲ್ಲಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರದ ದಾಖಲೆಯಲ್ಲಿ ಸಾವಿನ ಬಗ್ಗೆ ಡಾಟಾ ಇದೆ. ಅವರು ತಮ್ಮ ಹೇಳಿಕೆಗೆ ಆಧಾರ ಕೊಟ್ಟರೆ ಪರಿಶೀಲಿಸುತ್ತೇವೆ. ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭಾ ಅಧಿವೇಶನ ನಡೆಯಲಿದ್ದು ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
After doing away with the practice of giving bouquets, garlands, and memorabilia at government events, Karnataka Chief Minister Basavaraj S Bommai said on Thursday that he would soon issue an order banning guard of honour given to him and other ministers at every district and public places during their visits.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am