ಬ್ರೇಕಿಂಗ್ ನ್ಯೂಸ್
12-08-21 11:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಸರಕಾರಿ ಜಾಗದಲ್ಲಿ ಹೋದಲ್ಲಿ ಬಂದಲ್ಲಿ ಗಾರ್ಡ್ ಆಫ್ ಹಾನರ್ ಕೊಡುವುದು, ತಗೊಳ್ಳುವುದು ನಂಗೆ ಇಷ್ಟವಾಗಲ್ಲ. ಅದು ಬೇಡ ಎಂಬುದು ನನ್ನ ಭಾವನೆ. ಈ ಬಗ್ಗೆ ಬೆಂಗಳೂರಿಗೆ ಹೋದ ತಕ್ಷಣ ಆದೇಶವನ್ನು ಹೊರಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಿಷ್ಟಾಚಾರ ಪ್ರಕಾರ ಒಂದು ಕಡೆ ಎಲ್ಲಾದ್ರೂ ಅದರಲ್ಲೂ ಪೊಲೀಸ್ ಸಮಾರಂಭದಲ್ಲಿ ಮಾತ್ರ ಗೌರವ ವಂದನೆ ಕೊಟ್ಟರೆ ಸಾಕು. ಅದು ಬಿಟ್ಟು ಸಿಕ್ಕಲ್ಲಿ ಎಲ್ಲಾ ಗಾರ್ಡ್ ಆಫ್ ಹಾನರ್ ಬೇಡ ಎಂದು ಹೇಳುವ ಮೂಲಕ ತಮ್ಮ ನೈಜ ಸಮಾಜವಾದಿ ಭಾವನೆಯನ್ನು ತೆರೆದಿಟ್ಟಿದ್ದಾರೆ.
ಅಲ್ಲದೆ, ಯಾರೂ ಕಟೌಟ್ ಹೋರ್ಡಿಂಗ್ ಹಾಕೋದು ಬೇಡ. ಯಾರು ಕೂಡ ಶುಭಕೋರಲು ಹೋರ್ಡಿಂಗ್ ಹಾಕಬೇಡಿ. ನನ್ನ ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ನಾನು ಮನವಿ ಮಾಡುತ್ತೇನೆ. ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದರು.
ಉಡುಪಿಯಲ್ಲಿ ಪುಷ್ಪ ವ್ಯಾಪಾರಿಗಳ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ಹೇಳಿದ ಅವರು, ಹೂವಿನ ವ್ಯಾಪಾರಿಗಳಿಗೆ ತೊಂದರೆ ಕೊಡಬೇಕು ಎಂಬುದು ನನ್ನ ಉದ್ದೇಶ ಅಲ್ಲ. ಖಾಸಗಿಯಾಗಿ ಅವರು ಹೂವಿನ ವ್ಯಾಪಾರವನ್ನು ಬೇಕಾದಷ್ಟು ಮಾಡಬಹುದು. ಅದಕ್ಕೆ ಬೇಡಿಕೆಯೂ ಇರುತ್ತದೆ. ಸರಕಾರಿ ಕಾರ್ಯಕ್ರಮದಲ್ಲಿ ಮಾತ್ರ ಹೂಗುಚ್ಚ, ಹಾರ, ತುರಾಯಿ ಬೇಡ ಎಂದಿದ್ದೇನೆ ಎಂದು ಸೂಚ್ಯವಾಗಿ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಯಾವುದೇ ಮ್ಯಾಜಿಕ್ಕನ್ನು ಮಾಡುತ್ತಿಲ್ಲ. ಅಸಮಾಧಾನ ಏನೇ ಇದ್ದರೂ ಎಲ್ಲರೊಂದಿಗೂ ಮಾತಾಡುತ್ತೇನೆ. ಪ್ರೀತಿ ಮತ್ತು ವಿಶ್ವಾಸವೇ ನಾನು ಮಾಡುತ್ತಿರುವ ಮ್ಯಾಜಿಕ್ ಅಷ್ಟೇ ಎಂದು ಹೇಳಿದರು.
ಕೋವಿಡ್ ಸಂದರ್ಭ 10,0000 ಸಾವು ಆಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಎಲ್ಲಾ ಸಾವುಗಳ ಬಗ್ಗೆ ಸರಕಾರದ ದಾಖಲೆಯಲ್ಲಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರದ ದಾಖಲೆಯಲ್ಲಿ ಸಾವಿನ ಬಗ್ಗೆ ಡಾಟಾ ಇದೆ. ಅವರು ತಮ್ಮ ಹೇಳಿಕೆಗೆ ಆಧಾರ ಕೊಟ್ಟರೆ ಪರಿಶೀಲಿಸುತ್ತೇವೆ. ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭಾ ಅಧಿವೇಶನ ನಡೆಯಲಿದ್ದು ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
After doing away with the practice of giving bouquets, garlands, and memorabilia at government events, Karnataka Chief Minister Basavaraj S Bommai said on Thursday that he would soon issue an order banning guard of honour given to him and other ministers at every district and public places during their visits.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm