ಬ್ರೇಕಿಂಗ್ ನ್ಯೂಸ್
12-08-21 11:28 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೂರನೇ ಅಲೆಯ ಮುನ್ಸೂಚನೆಯೋ ಎನ್ನುವಂತೆ, ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಮುನ್ನೂರಕ್ಕೂ ಹೆಚ್ಚು ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಆಗಸ್ಟ್ 1 ರಿಂದ 10ರ ನಡುವೆ 354 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆ ಆಗಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ 187 ಹೆಣ್ಮಕ್ಕಳು ಮತ್ತು 167 ಗಂಡು ಮಕ್ಕಳಾಗಿದ್ದು 18 ವರ್ಷದ ಒಳಗಿನ ಮಕ್ಕಳಿಗೆ ಸೋಂಕು ತಗಲಿರುವುದನ್ನು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರ ಭಾಗದಲ್ಲಿಯೂ ಆಗಸ್ಟ್ ಮೊದಲ ವಾರದಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗಲಿರುವುದು ಪತ್ತೆಯಾಗಿದೆ. ಆದರೆ, ಸೋಂಕು ಪತ್ತೆಯಾದ ಬಹುತೇಕ ಮಕ್ಕಳಿಗೆ ವಿಪರೀತ ತಲೆನೋವು ಕಂಡುಬಂದಿದ್ದು ಅದು ಬಿಟ್ಟರೆ ಬೇರೇನೂ ರೋಗ ಉಲ್ಬಣಿಸಿದ ಬಗ್ಗೆ ಮಾಹಿತಿ ಇಲ್ಲ. ಹಲವು ಮಕ್ಕಳಲ್ಲಿ ಶೀತ, ಜ್ವರದ ಜೊತೆ ಮೈ ಕೈನೋವಿನ ಲಕ್ಷಣಗಳು ಪತ್ತೆಯಾಗಿವೆ. ಹೀಗಾಗಿ ಸದ್ಯ ಮನೆಯಲ್ಲೇ ಸೋಂಕು ಪತ್ತೆಯಾಗಿರುವ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಮೊದಲ ಅಲೆಯಲ್ಲಿ ದ.ಕ. ಜಿಲ್ಲೆಯಲ್ಲಿ 2200 ಮಂದಿ ಮಕ್ಕಳಿಗೆ ಸೋಂಕು ಕಂಡುಬಂದಿತ್ತು. 2ನೇ ಅಲೆಯಲ್ಲಿ 7000 ಮಕ್ಕಳಿಗೆ ಕೊರೊನಾ ಸೋಂಕು ಆಗಿತ್ತು ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿದ್ದಾರೆ. ಹೀಗಾಗಿ ಮಕ್ಕಳಿಗೆ ಸೋಂಕು ಆಗಿರುವ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 475 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಆಗಿದೆ.
More than 354 children below the age of 19 years have tested positive for Covid-19 in the past ten days in Mangalore, putting the city on alert. This is one of the highest number of cases among children reported in Karnataka so far.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm