ಬ್ರೇಕಿಂಗ್ ನ್ಯೂಸ್
12-08-21 11:45 pm Bengaluru Correspondent ಕರಾವಳಿ
ಬೆಂಗಳೂರು, ಆಗಸ್ಟ್ 12: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವಾಗಲೇ ಬೆಂಗಳೂರಿನಲ್ಲಿ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಬೆಂಗಳೂರು ನಗರ ಭಾಗದಲ್ಲಿ 499 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗಲಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ, 9 ವರ್ಷದ ಒಳಗಿನ 88 ಮಕ್ಕಳು ಆಗಸ್ಟ್ 1ರಿಂದ 10 ರ ನಡುವೆ ಸೋಂಕಿಗೆ ಒಳಗಾಗಿದ್ದಾರೆ. 10 ರಿಂದ 19 ವರ್ಷದೊಳಗಿನ 305 ಮಕ್ಕಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ವರದಿಯಾದ 499 ಪ್ರಕರಣಗಳ ಪೈಕಿ 263 ಕಳೆದ 5 ದಿನಗಳಲ್ಲಿ ಕಂಡುಬಂದಿದೆ. ಈ ಪೈಕಿ 88 ಪ್ರಕರಣಗಳು 9 ವರ್ಷದ ಒಳಗಿನದ್ದು ಮತ್ತು 175 ಪ್ರಕರಣಗಳು 10 ರಿಂದ 19 ವರ್ಷದ ಒಳಗಿನ ಮಕ್ಕಳದ್ದಿದೆ.
ಇದು ಮೂರನೇ ಅಲೆಯ ಮುನ್ಸೂಚನೆ ಎನ್ನಲಾಗುತ್ತಿದ್ದು ಈಗಾಗ್ಲೇ ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಮಕ್ಕಳಿಗೆ ಸೋಂಕು ತಗಲುತ್ತಿರುವುದು ದುಪ್ಪಟ್ಟು ಆಗುತ್ತಿರುವುದು ಕಂಡುಬಂದಿದೆ. ಹೆತ್ತವರು ಸ್ವತಃ ಎರಡು ಡೋಸ್ ಲಸಿಕೆ ಪಡೆಯುವುದರ ಜೊತೆಗೆ ಮಕ್ಕಳನ್ನು ಜನರ ಗುಂಪಿನಿಂದ ದೂರ ಇಡುವುದನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ದಿನಕ್ಕೆ 1500 ಕ್ಕೂ ಹೆಚ್ಚು ಪ್ರಕರಣಗಳು ಸದ್ಯಕ್ಕೆ ವರದಿಯಾಗುತ್ತಿದೆ.
ಈವರೆಗೆ 15,919 ಮಂದಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವು ಕಂಡಿದ್ದಾರೆ. ಇದರಲ್ಲಿ ಒಂಬತ್ತು ವರ್ಷದ ಒಳಗಿನ ಮಕ್ಕಳು 19 ಮಂದಿ ಇದ್ದಾರೆ. 10 ರಿಂದ 19 ವರ್ಷದ ಒಳಗಿನ 26 ಮಂದಿ ಮಕ್ಕಳು ಇದ್ದಾರೆ. 20 ರಿಂದ 30 ವರ್ಷದ ಒಳಗಿನ 279 ಮಂದಿ ಸಾವು ಕಂಡಿದ್ದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ.
More than 300 children below the age of 19 years have tested positive for Covid-19 in the past six days in Bengaluru, putting the city on alert. This is one of the highest number of cases among children reported in Karnataka so far.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm