ಬ್ರೇಕಿಂಗ್ ನ್ಯೂಸ್
13-08-21 12:40 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ಕರಾವಳಿಯಲ್ಲಿ ಭಯೋತ್ಪಾದಕರ ಹೆಜ್ಜೆ ಗುರುತು ದೃಢಪಟ್ಟಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಎನ್ಐಎ ಕಚೇರಿ ತೆರೆಯಬೇಕೆಂಬ ಆಗ್ರಹ ಕೇಳಿಬಂದಿತ್ತು. ಇದೀಗ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಈ ಬಗ್ಗೆ ಸಿಎಂ ಬೊಮ್ಮಾಯಿ ಅವರಲ್ಲಿ ಕೇಳಿದ ಪ್ರಶ್ನೆಗೆ, ಈಗಾಗ್ಲೇ ಇದರ ಬಗ್ಗೆ ಗೃಹ ಇಲಾಖೆಯಿಂದ ಸಭೆಗಳನ್ನು ನಡೆಸಲಾಗುತ್ತಿದೆ. ಇದಕ್ಕಾಗಿ ರಾಜ್ಯದಲ್ಲಿ ದಕ್ಷ ಗೃಹ ಸಚಿವರಿದ್ದಾರೆ. ಈ ಬಗ್ಗೆ ಎರಡು ಬಾರಿ ಮೀಟಿಂಗ್ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ಮುಂದೆಯೂ ಪರಿಶೀಲನೆ, ಸಭೆಗಳು ನಡೆಯಲಿದೆ. ಭದ್ರತಾ ವಿಚಾರಗಳ ಬಗ್ಗೆ ನಾವೇನೂ ಹೆಚ್ಚು ಮಾತನಾಡಲು ಆಗಲ್ಲ. ಈ ಬಗ್ಗೆ ನಾವೆಲ್ಲ ಒಟ್ಟಾಗಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕದ್ರಿ ಸರ್ಕಿಟ್ ಹೌಸ್ ಗೆ ಬಂದಿದ್ದ ವೇಳೆ ಕೇಳಿದ ಪ್ರಶ್ನೆಗೆ ಬೊಮ್ಮಾಯಿ ಚುಟುಕಾಗಿ ಉತ್ತರಿಸಿ ನಿರ್ಗಮಿಸಿದ್ದಾರೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ಉಳ್ಳಾಲಕ್ಕೆ ದಾಳಿ ನಡೆಸಿ, ಮಾಜಿ ಶಾಸಕರೊಬ್ಬರ ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಒಬ್ಬ ಯುವಕನನ್ನು ಬಂಧಿಸಿ ಕರೆದೊಯ್ದಿದ್ದರು. ಆನಂತರ ಭಟ್ಕಳದಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು, ಐಸಿಸ್ ಪರವಾಗಿ ಆನ್ಲೈನ್ ಮ್ಯಾಗಜಿನ್ ನಡೆಸುತ್ತಿದ್ದ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಬಜರಂಗದಳ ಕಾರ್ಯಕರ್ತರು ಉಳ್ಳಾಲದಲ್ಲಿ ಪ್ರತಿಭಟನೆ ನಡೆಸಿದ್ದು, ದಾಳಿಗೆ ಒಳಗಾಗಿದ್ದ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
Terror Links with ISIS CM Bommai hints of NIA office soon in Mangalore. Recently The Vishwa Hindu Parishad (VHP) on Wednesday reiterated its demand that a permanent National Investigation Agency (NIA) office and an Army camp be set up in Karnataka’s Mangaluru. The NIA had arrested Ammar Abdul Rahman of Ullal earlier this month in connection with the ISIS module case of Kerala. Referring to the case, VHP Mangaluru division secretary Sharan Pumpwell had on Monday claimed that it proved the anti-nationals were making the coastal region their base.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm