ಮತ್ತೆ ಲಾಕ್ಡೌನ್ ಮಾದರಿ ನಿಯಂತ್ರಣ ಹೇರುವ ಸುಳಿವು ; ತಜ್ಞರ ವರದಿ ಆಧರಿಸಿ ಕ್ರಮ - ಸಿಎಂ, ಸ್ವತಃ ಅಂಗಾಂಗ ದಾನ ಘೋಷಿಸಿದ ಬೊಮ್ಮಾಯಿ ! 

13-08-21 12:54 pm       Udupi Correspondent   ಕರಾವಳಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ. ‌

ಇಂದು ವಲ್ಡ್  ಆರ್ಗನ್  ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ.‌ ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.

CM Bommai hits Chances of Lockdown in Karnataka again due to spike in Covid 19 Cases