ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.



ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm