ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.



ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm