ಬ್ರೇಕಿಂಗ್ ನ್ಯೂಸ್
13-08-21 09:45 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಗರದ ಕೆಪಿಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿದ್ದು, ಕೋವಿಡ್ ಸೋಂಕಿತ ಮತ್ತು ಇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗ ಮಾಡದೆ ಅಲ್ಲಿನ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಪಿಟಿ ಕಾಲೇಜಿನಲ್ಲಿ ಶುಕ್ರವಾರ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿತ್ತು. ಕೋವಿಡ್ ಸೋಂಕಿತರು ಕೂಡ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು, ಅವರಿಗೆ ಪ್ರತ್ಯೇಕ ವಿಭಾಗ ಮಾಡುವ ನಿಟ್ಟಿನಲ್ಲಿ ಆಯಾ ಕಾಲೇಜು ಆಡಳಿತಕ್ಕೆ ಜಿಲ್ಲಾಡಳಿತದಿಂದ ನಿರ್ದೇಶನ ನೀಡಲಾಗಿತ್ತು. ಆದರೆ, ಕೆಪಿಟಿ ಕಾಲೇಜಿನಲ್ಲಿ ಈ ವಿಚಾರದಲ್ಲಿ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಒಬ್ಬ ವಿದ್ಯಾರ್ಥಿ ಕೋವಿಡ್ ಸೋಂಕು ಆಗಿರುವ ಬಗ್ಗೆ ಆಯಾ ವಿಭಾಗದ ಪ್ರಮುಖರಿಗೆ ಮಾಹಿತಿ ನೀಡಿದ್ದ. ಆಗಸ್ಟ್ 7ರಂದು ತಾನು ಪಾಸಿಟಿವ್ ಆಗಿರುವ ಬಗ್ಗೆ ಸಂದೇಶವನ್ನು ಕಾಲೇಜು ಪ್ರಮುಖರಿಗೆ ನೀಡಿದ್ದ. ಕಾಲೇಜಿನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ ಎನ್ನುವ ಸೂಚನೆ ನೀಡಿದ್ದರಿಂದ ಪರೀಕ್ಷೆಗೂ ಹಾಜರಾಗಿದ್ದ.
ಆದರೆ, ಪಾಸಿಟಿವ್ ಆಗಿದ್ದ ವಿದ್ಯಾರ್ಥಿಯನ್ನು ಪ್ರತ್ಯೇಕ ಹಾಲ್ ನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿರಲಿಲ್ಲ. ಸಿಬಂದಿ ಮತ್ತು ಉಪನ್ಯಾಸಕರಿಗೆ ಈ ಬಗ್ಗೆ ಮಾಹಿತಿ ಇದ್ದರೂ, ಮಾರ್ಗಸೂಚಿಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರೇ ಎನ್ನುವ ಅನುಮಾನ ಎದ್ದಿದೆ. ಕೆಲವು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದರೂ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಕೆಲವರಿಗೆ ಮಾತ್ರ ಪ್ರತ್ಯೇಕ ಕೊಠಡಿ ಇದ್ದರೆ ಒಂದಷ್ಟು ಮಂದಿಯನ್ನು ಅಸ್ಪೃಶ್ಯರ ರೀತಿ ಇತರ ವಿದ್ಯಾರ್ಥಿಗಳ ನಡುವೆ ಹಾಲ್ ನಲ್ಲೇ ಒಂದು ಮೂಲೆಯಲ್ಲಿ ಕುಳ್ಳಿರಿಸಿದ ಪ್ರಸಂಗ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೋವಿಡ್ ಸೋಂಕು ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಸರಕಾರ ಏನೆಲ್ಲ ಕಸರತ್ತು ನಡೆಸುತ್ತಿದ್ದರೂ, ಅದರ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆತಂಕಗಳಿದ್ದರೂ, ಪರೀಕ್ಷೆಗೆ ಕೋವಿಡ್ ಸೋಂಕಿತರಿಗೂ ಅವಕಾಶ ನೀಡಲಾಗಿತ್ತು. ಆದರೆ, ಕೆಲವು ಕಾಲೇಜು ಪ್ರಮುಖರು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸದೆ ಅಲ್ಲಿನ ಸಿಬಂದಿ ಮತ್ತು ಇತರ ವಿದ್ಯಾರ್ಥಿಗಳಿಗೂ ಸೋಂಕು ಹರಡಲು ಕಾರಣವಾಗುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
KPT college in Mangalore is alleged of conducting Semister exams with students tested covid posting in the same examination hall. Students slam administration for negligence.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am