ಬ್ರೇಕಿಂಗ್ ನ್ಯೂಸ್
14-08-21 11:56 am Mangaluru Correspondent ಕರಾವಳಿ
ಉಡುಪಿ, ಆ.14 : ಸೌದಿ ಅರೇಬಿಯಾದಲ್ಲಿ ಅಲ್ಲಿನ ರಾಜನ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ತಾನು ಮಾಡದ ತಪ್ಪಿಗೆ ಜೈಲು ವಾಸ ಅನುಭವಿಸಿದ್ದ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಬಿಡುಗಡೆಯಾಗಿದ್ದು ಆ.18ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಉಡುಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಮಾಡಬೇಕಾಗಿದ್ದ ಅಗತ್ಯ ನಿಯಮಗಳನ್ನು ಪೂರೈಸಿದ್ದು ಆ.17ರಂದು ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ಆ.18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ತನಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಹರೀಶ್ ಬಂಗೇರ ಹೆಸರಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಪ್ರಕರಣ ಸಂಬಂಧಿಸಿ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು 2019ರ ಡಿಸೆಂಬರ್ ನಲ್ಲಿ ಬಂಧಿಸಿದ್ದರು. ಈ ನಡುವೆ ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದ್ರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದಾಗುತ್ತಿದ್ದಂತೆ, ಪೊಲೀಸರು ಆರೋಪಿಗಳನ್ನು ಬಂಧಿಸಿರುವ ವರದಿಯನ್ನು ಸೌದಿ ಅರೇಬಿಯಾದ ಪೊಲೀಸರಿಗೆ ನೀಡಲಾಗಿತ್ತು. ಇದರಂತೆ, ಸಂತ್ರಸ್ತ ಹರೀಶ್ ಬಂಗೇರ ಅವರನ್ನು ಕೊನೆಗೂ ಸೌದಿ ಪೊಲೀಸರು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
Harish Bangera, native of Udupi, who was arrested and imprisoned by the Saudi authorities for allegedly making blasphemous comments on the Saudi Crown Prince and Mecca, the holy site of Muslims across the world and released recently, will reach Bengaluru on August 18. This information was given by Shobha Karandlaje, union minister for agriculture and farmers’ welfare.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am