ಬ್ರೇಕಿಂಗ್ ನ್ಯೂಸ್
14-08-21 11:56 am Mangaluru Correspondent ಕರಾವಳಿ
ಉಡುಪಿ, ಆ.14 : ಸೌದಿ ಅರೇಬಿಯಾದಲ್ಲಿ ಅಲ್ಲಿನ ರಾಜನ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ತಾನು ಮಾಡದ ತಪ್ಪಿಗೆ ಜೈಲು ವಾಸ ಅನುಭವಿಸಿದ್ದ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಬಿಡುಗಡೆಯಾಗಿದ್ದು ಆ.18ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಉಡುಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಮಾಡಬೇಕಾಗಿದ್ದ ಅಗತ್ಯ ನಿಯಮಗಳನ್ನು ಪೂರೈಸಿದ್ದು ಆ.17ರಂದು ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ಆ.18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ತನಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಫೇಸ್ ಬುಕ್ ನಲ್ಲಿ ಹರೀಶ್ ಬಂಗೇರ ಹೆಸರಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಪ್ರಕರಣ ಸಂಬಂಧಿಸಿ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು 2019ರ ಡಿಸೆಂಬರ್ ನಲ್ಲಿ ಬಂಧಿಸಿದ್ದರು. ಈ ನಡುವೆ ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದ್ರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದಾಗುತ್ತಿದ್ದಂತೆ, ಪೊಲೀಸರು ಆರೋಪಿಗಳನ್ನು ಬಂಧಿಸಿರುವ ವರದಿಯನ್ನು ಸೌದಿ ಅರೇಬಿಯಾದ ಪೊಲೀಸರಿಗೆ ನೀಡಲಾಗಿತ್ತು. ಇದರಂತೆ, ಸಂತ್ರಸ್ತ ಹರೀಶ್ ಬಂಗೇರ ಅವರನ್ನು ಕೊನೆಗೂ ಸೌದಿ ಪೊಲೀಸರು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
Harish Bangera, native of Udupi, who was arrested and imprisoned by the Saudi authorities for allegedly making blasphemous comments on the Saudi Crown Prince and Mecca, the holy site of Muslims across the world and released recently, will reach Bengaluru on August 18. This information was given by Shobha Karandlaje, union minister for agriculture and farmers’ welfare.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm