ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm