ಬ್ರೇಕಿಂಗ್ ನ್ಯೂಸ್
14-08-21 04:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಕುಟುಂಬಸ್ಥರು ಭಯೋತ್ಪಾದಕರ ಜೊತೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಇದಿನಬ್ಬರ ಮೊಮ್ಮಗಳು ಮತ್ತು ಆಕೆಯ ಗಂಡ ಸಿರಿಯಾಕ್ಕೆ ಹೋಗಿ ಮೃತಪಟ್ಟಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ, ಅಲ್ಲಿನ ಶಾಸಕ ಖಾದರ್ ಮಾತ್ರ ಈ ಬಗ್ಗೆ ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನುತ್ತಿದ್ದಾರೆ. ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನಲು ಉಳ್ಳಾಲ ಏನು ಪಾಕಿಸ್ತಾನದಲ್ಲಿ ಇದೆಯೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರಶ್ನಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸುದರ್ಶನ್, ಎನ್ಐಎ ತನಿಖೆಯ ಬಗ್ಗೆ ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.


ಕಾಂಗ್ರೆಸಿನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಅದನ್ನು ಜಿಲ್ಲಾ ಬಿಜೆಪಿ ಸಮರ್ಥಿಸುತ್ತದೆ. ಇದಿನಬ್ಬರ ಮನೆಯಲ್ಲಿ ನಡೆದ ಮತಾಂತರ ವಿಚಾರವನ್ನು ಕೇಳಲು ನೀವು ಯಾರು ಎಂದು ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡುತ್ತೇವೆ. ಖಂಡನೆ ಮಾಡುತ್ತೇವೆ. ಅದನ್ನ ಪ್ರಶ್ನೆ ಮಾಡೋಕೆ ನೀವ್ಯಾರು ಅಂತ ಶಾಸಕ ಯು.ಟಿ ಖಾದರ್ ಅವರನ್ನು ಸುದರ್ಶನ್ ಮೂಡಬಿದ್ರೆ ಪ್ರಶ್ನೆ ಮಾಡಿದರು.
ಇದು ಇಂದು ನಿನ್ನೆಯ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ. ಯು.ಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಹೇಳುವುದಕ್ಕೆ ಉಳ್ಳಾಲ ಏನೂ ಪಾಕಿಸ್ತಾನದಲ್ಲಿ ಇರೋದಲ್ಲ. ಅದು ನಮ್ಮಲ್ಲೇ ಇದೆ ಎಂದು ತಿರುಗೇಟು ನೀಡಿದರು.
Video:
Former MLA Idinabbas house raid by NIA in ullal proves ISIS link of family slams Sudarshan Moodbidri. Also he slammed Khader who shouted at VHP for protesting near Deepthi Marlas house.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm