ಬ್ರೇಕಿಂಗ್ ನ್ಯೂಸ್
14-08-21 04:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಕುಟುಂಬಸ್ಥರು ಭಯೋತ್ಪಾದಕರ ಜೊತೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಇದಿನಬ್ಬರ ಮೊಮ್ಮಗಳು ಮತ್ತು ಆಕೆಯ ಗಂಡ ಸಿರಿಯಾಕ್ಕೆ ಹೋಗಿ ಮೃತಪಟ್ಟಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ, ಅಲ್ಲಿನ ಶಾಸಕ ಖಾದರ್ ಮಾತ್ರ ಈ ಬಗ್ಗೆ ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನುತ್ತಿದ್ದಾರೆ. ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನಲು ಉಳ್ಳಾಲ ಏನು ಪಾಕಿಸ್ತಾನದಲ್ಲಿ ಇದೆಯೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರಶ್ನಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸುದರ್ಶನ್, ಎನ್ಐಎ ತನಿಖೆಯ ಬಗ್ಗೆ ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.


ಕಾಂಗ್ರೆಸಿನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಅದನ್ನು ಜಿಲ್ಲಾ ಬಿಜೆಪಿ ಸಮರ್ಥಿಸುತ್ತದೆ. ಇದಿನಬ್ಬರ ಮನೆಯಲ್ಲಿ ನಡೆದ ಮತಾಂತರ ವಿಚಾರವನ್ನು ಕೇಳಲು ನೀವು ಯಾರು ಎಂದು ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡುತ್ತೇವೆ. ಖಂಡನೆ ಮಾಡುತ್ತೇವೆ. ಅದನ್ನ ಪ್ರಶ್ನೆ ಮಾಡೋಕೆ ನೀವ್ಯಾರು ಅಂತ ಶಾಸಕ ಯು.ಟಿ ಖಾದರ್ ಅವರನ್ನು ಸುದರ್ಶನ್ ಮೂಡಬಿದ್ರೆ ಪ್ರಶ್ನೆ ಮಾಡಿದರು.
ಇದು ಇಂದು ನಿನ್ನೆಯ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ. ಯು.ಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಹೇಳುವುದಕ್ಕೆ ಉಳ್ಳಾಲ ಏನೂ ಪಾಕಿಸ್ತಾನದಲ್ಲಿ ಇರೋದಲ್ಲ. ಅದು ನಮ್ಮಲ್ಲೇ ಇದೆ ಎಂದು ತಿರುಗೇಟು ನೀಡಿದರು.
Video:
Former MLA Idinabbas house raid by NIA in ullal proves ISIS link of family slams Sudarshan Moodbidri. Also he slammed Khader who shouted at VHP for protesting near Deepthi Marlas house.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm