ಬ್ರೇಕಿಂಗ್ ನ್ಯೂಸ್
14-08-21 04:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಕುಟುಂಬಸ್ಥರು ಭಯೋತ್ಪಾದಕರ ಜೊತೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಇದಿನಬ್ಬರ ಮೊಮ್ಮಗಳು ಮತ್ತು ಆಕೆಯ ಗಂಡ ಸಿರಿಯಾಕ್ಕೆ ಹೋಗಿ ಮೃತಪಟ್ಟಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ, ಅಲ್ಲಿನ ಶಾಸಕ ಖಾದರ್ ಮಾತ್ರ ಈ ಬಗ್ಗೆ ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನುತ್ತಿದ್ದಾರೆ. ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನಲು ಉಳ್ಳಾಲ ಏನು ಪಾಕಿಸ್ತಾನದಲ್ಲಿ ಇದೆಯೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರಶ್ನಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸುದರ್ಶನ್, ಎನ್ಐಎ ತನಿಖೆಯ ಬಗ್ಗೆ ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.
ಕಾಂಗ್ರೆಸಿನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಅದನ್ನು ಜಿಲ್ಲಾ ಬಿಜೆಪಿ ಸಮರ್ಥಿಸುತ್ತದೆ. ಇದಿನಬ್ಬರ ಮನೆಯಲ್ಲಿ ನಡೆದ ಮತಾಂತರ ವಿಚಾರವನ್ನು ಕೇಳಲು ನೀವು ಯಾರು ಎಂದು ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡುತ್ತೇವೆ. ಖಂಡನೆ ಮಾಡುತ್ತೇವೆ. ಅದನ್ನ ಪ್ರಶ್ನೆ ಮಾಡೋಕೆ ನೀವ್ಯಾರು ಅಂತ ಶಾಸಕ ಯು.ಟಿ ಖಾದರ್ ಅವರನ್ನು ಸುದರ್ಶನ್ ಮೂಡಬಿದ್ರೆ ಪ್ರಶ್ನೆ ಮಾಡಿದರು.
ಇದು ಇಂದು ನಿನ್ನೆಯ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ. ಯು.ಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಹೇಳುವುದಕ್ಕೆ ಉಳ್ಳಾಲ ಏನೂ ಪಾಕಿಸ್ತಾನದಲ್ಲಿ ಇರೋದಲ್ಲ. ಅದು ನಮ್ಮಲ್ಲೇ ಇದೆ ಎಂದು ತಿರುಗೇಟು ನೀಡಿದರು.
Video:
Former MLA Idinabbas house raid by NIA in ullal proves ISIS link of family slams Sudarshan Moodbidri. Also he slammed Khader who shouted at VHP for protesting near Deepthi Marlas house.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm