ಬ್ರೇಕಿಂಗ್ ನ್ಯೂಸ್
15-08-21 11:06 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಖ್ಯಾತ ಭಾಗವತ, ಪ್ರಸಂಗಕರ್ತ ಯಕ್ಷಗಾನದ ಹಿಮ್ಮೇಳ- ಮುಮ್ಮೇಳದಲ್ಲಿ ಸವ್ಯಸಾಚಿಯೆಂದು ಹೆಸರು ಮಾಡಿದ್ದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ಆಸ್ಪತ್ರೆಯಲ್ಲಿದ್ದ ಅವರನ್ನು ಇತ್ತೀಚೆಗೆ ಮನೆಗೆ ಒಯ್ಯಲಾಗಿತ್ತು. ಶನಿವಾರ ದಿಢೀರ್ ಅಸ್ವಸ್ಥರಾಗಿದ್ದು ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಕೊಣಾಜೆ ಸಮೀಪದ ಮಂಜನಾಡಿಯ ಬೊಟ್ಟಿಕೆರೆ ಎಂಬಲ್ಲಿನ ನಿವಾಸಿಯಾಗಿದ್ದ ಪುರುಷೋತ್ತಮ ಪೂಂಜ ಬಿಎಸ್ಸಿ ಪದವೀಧರರು. ಪದವಿ ಬಳಿಕ ಅವರು ಆನೆಗುಂಡಿ ಗಣಪತಿ ಭಟ್ ಮತ್ತು ಹೊಸಹಿತ್ಲು ಮಹಾಲಿಂಗ ಭಟ್ಟರ ಮಾರ್ಗದರ್ಶನದಲ್ಲಿ ಯಕ್ಷಗಾನದ ಹಿಮ್ಮೇಳ- ಮುಮ್ಮೇಳಗಳಲ್ಲಿ ತರಬೇತಿ ಪಡೆದಿದ್ದರು. ಆರಂಭದಲ್ಲಿ ಉದ್ಯೋಗ ನಿಮಿತ್ತ ಮುಂಬೈಯಲ್ಲಿದ್ದ ಪೂಂಜರು ಬಳಿಕ ವೃತ್ತಿ ಮೇಳಗಳಲ್ಲಿ ತೊಡಗಿಸಿದ್ದರು. ಸಮರ್ಥ ವೇಷಧಾರಿ, ಚೆಂಡೆ- ಮದ್ದಳೆ ವಾದಕ, ಭಾಗವತ ಮತ್ತು ಪ್ರಸಂಗಕರ್ತರೂ ಆಗಿದ್ದ ಪೂಂಜರ ಗರಡಿಯಲ್ಲಿ ಅದೆಷ್ಟೋ ಮಂದಿ ಕಲಾವಿದರಾಗಿ ವೃತ್ತಿ ಬದುಕು ನಡೆಸುತ್ತಿದ್ದಾರೆ.
ಮುಂಬೈನಲ್ಲಿ ಗೀತಾಂಬಿಕಾ, ಉಪ್ಪಳ ಭಗವತಿ, ಪುತ್ತೂರು, ಕರ್ನಾಟಕ ಮತ್ತು ಕಟೀಲು ಮೇಳಗಳಲ್ಲಿ 42 ವರ್ಷ ತಿರುಗಾಟ ಮಾಡಿದ್ದ ಪೂಂಜರು ಪ್ರಸಕ್ತ ಕಟೀಲು ಒಂದನೇ ಮೇಳದ ಪ್ರಧಾನ ಭಾಗವತರಾಗಿದ್ದರು. ಕಟೀಲಿನ ಎಲ್ಲ ಮೇಳಗಳ ಪ್ರಸಂಗ, ಪಾತ್ರ ಸಂಯೋಜನೆ ಜವಾಬ್ದಾರಿಯನ್ನೂ ಇವರೇ ನಿರ್ವಹಿಸುತ್ತಿದ್ದರು. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಸುಮಾರು 32 ಪ್ರಸಂಗಗಳನ್ನು ಅವರು ಬರೆದಿದ್ದಾರೆ.
ರಾಮಾಯಣದ ಕೊನೆಯ ಅಂಕ ಮಾನಿಷಾದ ಇವರ ಅತೀ ಹೆಚ್ಚು ಹೆಗ್ಗಳಿಕೆ ಪಡೆದ ಪ್ರಸಂಗ. ಉಳಿದಂತೆ ನಳಿನಾಕ್ಷಿ ನಂದಿನಿ, ಉಭಯಕುಲ ಬಿಲ್ಲೋಜ, ಮೇಘ ಮಯೂರಿ, ಸ್ವರ್ಣನೂಪುರ (ಕನ್ನಡ) ಕುಡಿಯನ ಕೊಂಬಿರೆಲ್, ದಳವಾಯಿ ಮುದ್ದಣೆ, ಗರುಡಕೇಂಜವೆ, ಪಟ್ಟದಕತ್ತಿ, ಕುಡಿಯನ ಕಣ್ಣ್, ಸ್ವರ್ಣಕೇದಗೆ (ತುಳು) ಪ್ರಸಂಗಗಳು ವೃತ್ತಿ ಮೇಳಗಳಲ್ಲಿ ಪ್ರಯೋಗಗೊಂಡು ಜನಪ್ರಿಯವಾಗಿದ್ದವು.
ಅವರ 29 ಪ್ರಸಂಗಗಳನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ 'ಅಂಬುರುಹ' ಎಂಬ ಹೆಸರಿನಿಂದ ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ನಾನಾ ಪ್ರಶಸ್ತಿ ಪಡೆದ ಅವರು ಯಕ್ಷ ಗಾನ ಅಕಾಡೆಮಿಯ ಸದಸ್ಯರಾಗಿದ್ದರು. ಮನೆಯಲ್ಲಿಯೇ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Bottikere Purushotham Poonja (68), renowned as 'Abhinava Valmiki' and an all-rounder in the field of Yakshagana, passed away late night on Saturday, August 14. Poonja, who was suffering from illness, was undergoing treatment at a hospital. He was a BSc graduate and
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm