ಬ್ರೇಕಿಂಗ್ ನ್ಯೂಸ್
15-08-21 11:06 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಖ್ಯಾತ ಭಾಗವತ, ಪ್ರಸಂಗಕರ್ತ ಯಕ್ಷಗಾನದ ಹಿಮ್ಮೇಳ- ಮುಮ್ಮೇಳದಲ್ಲಿ ಸವ್ಯಸಾಚಿಯೆಂದು ಹೆಸರು ಮಾಡಿದ್ದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ಆಸ್ಪತ್ರೆಯಲ್ಲಿದ್ದ ಅವರನ್ನು ಇತ್ತೀಚೆಗೆ ಮನೆಗೆ ಒಯ್ಯಲಾಗಿತ್ತು. ಶನಿವಾರ ದಿಢೀರ್ ಅಸ್ವಸ್ಥರಾಗಿದ್ದು ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಕೊಣಾಜೆ ಸಮೀಪದ ಮಂಜನಾಡಿಯ ಬೊಟ್ಟಿಕೆರೆ ಎಂಬಲ್ಲಿನ ನಿವಾಸಿಯಾಗಿದ್ದ ಪುರುಷೋತ್ತಮ ಪೂಂಜ ಬಿಎಸ್ಸಿ ಪದವೀಧರರು. ಪದವಿ ಬಳಿಕ ಅವರು ಆನೆಗುಂಡಿ ಗಣಪತಿ ಭಟ್ ಮತ್ತು ಹೊಸಹಿತ್ಲು ಮಹಾಲಿಂಗ ಭಟ್ಟರ ಮಾರ್ಗದರ್ಶನದಲ್ಲಿ ಯಕ್ಷಗಾನದ ಹಿಮ್ಮೇಳ- ಮುಮ್ಮೇಳಗಳಲ್ಲಿ ತರಬೇತಿ ಪಡೆದಿದ್ದರು. ಆರಂಭದಲ್ಲಿ ಉದ್ಯೋಗ ನಿಮಿತ್ತ ಮುಂಬೈಯಲ್ಲಿದ್ದ ಪೂಂಜರು ಬಳಿಕ ವೃತ್ತಿ ಮೇಳಗಳಲ್ಲಿ ತೊಡಗಿಸಿದ್ದರು. ಸಮರ್ಥ ವೇಷಧಾರಿ, ಚೆಂಡೆ- ಮದ್ದಳೆ ವಾದಕ, ಭಾಗವತ ಮತ್ತು ಪ್ರಸಂಗಕರ್ತರೂ ಆಗಿದ್ದ ಪೂಂಜರ ಗರಡಿಯಲ್ಲಿ ಅದೆಷ್ಟೋ ಮಂದಿ ಕಲಾವಿದರಾಗಿ ವೃತ್ತಿ ಬದುಕು ನಡೆಸುತ್ತಿದ್ದಾರೆ.
ಮುಂಬೈನಲ್ಲಿ ಗೀತಾಂಬಿಕಾ, ಉಪ್ಪಳ ಭಗವತಿ, ಪುತ್ತೂರು, ಕರ್ನಾಟಕ ಮತ್ತು ಕಟೀಲು ಮೇಳಗಳಲ್ಲಿ 42 ವರ್ಷ ತಿರುಗಾಟ ಮಾಡಿದ್ದ ಪೂಂಜರು ಪ್ರಸಕ್ತ ಕಟೀಲು ಒಂದನೇ ಮೇಳದ ಪ್ರಧಾನ ಭಾಗವತರಾಗಿದ್ದರು. ಕಟೀಲಿನ ಎಲ್ಲ ಮೇಳಗಳ ಪ್ರಸಂಗ, ಪಾತ್ರ ಸಂಯೋಜನೆ ಜವಾಬ್ದಾರಿಯನ್ನೂ ಇವರೇ ನಿರ್ವಹಿಸುತ್ತಿದ್ದರು. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಸುಮಾರು 32 ಪ್ರಸಂಗಗಳನ್ನು ಅವರು ಬರೆದಿದ್ದಾರೆ.
ರಾಮಾಯಣದ ಕೊನೆಯ ಅಂಕ ಮಾನಿಷಾದ ಇವರ ಅತೀ ಹೆಚ್ಚು ಹೆಗ್ಗಳಿಕೆ ಪಡೆದ ಪ್ರಸಂಗ. ಉಳಿದಂತೆ ನಳಿನಾಕ್ಷಿ ನಂದಿನಿ, ಉಭಯಕುಲ ಬಿಲ್ಲೋಜ, ಮೇಘ ಮಯೂರಿ, ಸ್ವರ್ಣನೂಪುರ (ಕನ್ನಡ) ಕುಡಿಯನ ಕೊಂಬಿರೆಲ್, ದಳವಾಯಿ ಮುದ್ದಣೆ, ಗರುಡಕೇಂಜವೆ, ಪಟ್ಟದಕತ್ತಿ, ಕುಡಿಯನ ಕಣ್ಣ್, ಸ್ವರ್ಣಕೇದಗೆ (ತುಳು) ಪ್ರಸಂಗಗಳು ವೃತ್ತಿ ಮೇಳಗಳಲ್ಲಿ ಪ್ರಯೋಗಗೊಂಡು ಜನಪ್ರಿಯವಾಗಿದ್ದವು.
ಅವರ 29 ಪ್ರಸಂಗಗಳನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ 'ಅಂಬುರುಹ' ಎಂಬ ಹೆಸರಿನಿಂದ ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ನಾನಾ ಪ್ರಶಸ್ತಿ ಪಡೆದ ಅವರು ಯಕ್ಷ ಗಾನ ಅಕಾಡೆಮಿಯ ಸದಸ್ಯರಾಗಿದ್ದರು. ಮನೆಯಲ್ಲಿಯೇ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Bottikere Purushotham Poonja (68), renowned as 'Abhinava Valmiki' and an all-rounder in the field of Yakshagana, passed away late night on Saturday, August 14. Poonja, who was suffering from illness, was undergoing treatment at a hospital. He was a BSc graduate and
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm