ಬ್ರೇಕಿಂಗ್ ನ್ಯೂಸ್
15-08-21 02:10 pm Giridhar Shetty, Mangaluru ಕರಾವಳಿ
ಮಂಗಳೂರು, ಆಗಸ್ಟ್ 15: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವ ಕಳೆಕಟ್ಟಿದ್ದರೂ, ನಗರದ ಹೃದಯ ಭಾಗ ಹಂಪನಕಟ್ಟೆಯ ಗಾಂಧಿ ಪಾರ್ಕಿನಲ್ಲಿರುವ ಗಾಂಧಿ ತಾತ ಮಾತ್ರ ಅನಾಥರಾಗಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ಆವರಣದಲ್ಲಿ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ಪಾರ್ಕ್ ಸ್ಥಿತಿ ಗಬ್ಬೆದ್ದು ಹೋಗಿದೆ.
ಸ್ವಾತಂತ್ರ್ಯ ಕಾಲದಲ್ಲಿ ಗಾಂಧೀಜಿ ಮಂಗಳೂರಿಗೆ ಬಂದಿದ್ದ ನೆನಪಿನಲ್ಲಿ ಪಾರ್ಕ್ ಮಧ್ಯೆ ಗಾಂಧಿಯ ಪ್ರತಿಮೆ ಸ್ಥಾಪಿಸಲಾಗಿತ್ತು. ಸುಂದರ ಪಾರ್ಕ್ ಆಗಿದ್ದಲ್ಲದೆ, ಸತ್ಯಾಗ್ರಹ ಹೆಸರಿನ ಪ್ರತಿಭಟನೆ, ಉಪವಾಸಗಳು ಇದೇ ಜಾಗದಲ್ಲಿ ನಡೆಯುತ್ತಿದ್ದವು. ಇಂಥ ಹೆಗ್ಗಳಿಕೆ ಹೊಂದಿರುವ ಗಾಂಧಿ ಪಾರ್ಕ್ ನಲ್ಲಿ ವಿಶೇಷ ದಿನಗಳಂದು ಮಹಾನಗರ ಪಾಲಿಕೆಯಿಂದಲೇ ಗಾಂಧಿ ತಾತನಿಗೆ ಗೌರವ ಸಲ್ಲಿಸುವ ಸಂಪ್ರದಾಯ ಇದೆ.







ಆದರೆ, ಈ ಬಾರಿ ಅಲ್ಲಿನ ಪಾರ್ಕ್, ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಗಬ್ಬೆದ್ದು ಹೋಗಿದ್ದು, ಕಬ್ಬಿಣದ ರಾಡ್ ರಾಶಿ ಬಿದ್ದಿದ್ದರೆ, ಗಾಂಧಿ ಪ್ರತಿಮೆಯ ಬುಡದಲ್ಲಿ ಪ್ಲಾಸ್ಟಿಕ್ ಸರಂಜಾಮುಗಳು, ಕಬ್ಬಿಣ ಇನ್ನಿತರ ವೇಸ್ಟ್ ಸರಕುಗಳು, ಕಾರ್ಮಿಕರ ಬಟ್ಟೆಗಳನ್ನು ರಾಶಿ ಹಾಕಲಾಗಿದೆ. ಕನಿಷ್ಠ ಸ್ವಾತಂತ್ರ್ಯ ದಿನಕ್ಕಾದರೂ ಗಾಂಧಿ ಪ್ರತಿಮೆಯ ಆವರಣವನ್ನು ಶುಚಿಗೊಳಿಸಿಲ್ಲ. ಸ್ವಾತಂತ್ರ್ಯ, ಗಣರಾಜ್ಯ ಇನ್ನಿತರ ವಿಶೇಷ ದಿನಗಳ ಸಂದರ್ಭದಲ್ಲಿ ಗಾಂಧೀಜಿ, ಅಂಬೇಡ್ಕರ್ ಪ್ರತಿಮೆಗಳಿಗೆ ಹೂಹಾರ ಹಾಕುವುದು, ಪ್ರತಿಮೆಗಳನ್ನು ಶುಚಿಗೊಳಿಸುವುದನ್ನು ಮಾಡಲಾಗುತ್ತದೆ. ಆದರೆ, ಈ ಬಾರಿ ಮಾತ್ರ ಇಲ್ಲಿನ ಗಾಂಧಿ ತಾತನಿಗೆ ಸ್ವಾತಂತ್ರ್ಯವೇ ಸಿಗದಂತಾಗಿದೆ.
ಗಬ್ಬೆದ್ದು ನಾರುವ ಪರಿಸರದಲ್ಲಿ ಗಾಂಧಿಯ ಪ್ರತಿಮೆ ಅನಾಥವಾಗಿ ನಿಂತು ಬಿಟ್ಟಿದೆ. ನಮ್ಮ ಪ್ರತಿನಿಧಿ ಅಲ್ಲಿಗೆ ತೆರಳಿದ್ದ ಸಂದರ್ಭ ಅಲ್ಲಿ ಕೆಲಸ ಮಾಡುವ ಕಾರ್ಮಿಕನೊಬ್ಬ ಗಾಂಧಿಯ ಕೊರಳಿಗೆ ಹೂವಿನ ಹಾರ ತಂದು ಹಾಕಿದ್ದಾನೆ. ಕೈಗೊಂದು ತ್ರಿವರ್ಣದ ಪ್ಲಾಸ್ಟಿಕ್ ಧ್ವಜವನ್ನೂ ಇರಿಸಿದ್ದಾನೆ. ಆದರೆ, ಮಹಾನಗರ ಪಾಲಿಕೆಯಾಗಲೀ, ಇತರ ಯಾವುದೇ ಸಂಘಟನೆಗಳ ಕಾರ್ಯಕರ್ತರಾಗದಲೀ ಗಾಂಧಿಯ ದುಸ್ಥಿತಿಯನ್ನು ಗಮನಿಸಿಲ್ಲ. ಎಷ್ಟೋ ಬಾರಿ ಕಾಂಗ್ರೆಸ್ ಕಾರ್ಯಕರ್ತರು ಇದೇ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಆದರೆ, ಈ ಬಾರಿ ಸ್ವಾತಂತ್ರ್ಯೋತ್ಸವ ದಿನದಂದೇ ಗಾಂಧಿಯನ್ನು ಆಡಳಿತ ಮತ್ತು ವಿಪಕ್ಷದ ಜನಪ್ರತಿನಿಧಿಗಳೆಲ್ಲ ಸೇರಿ ಅನಾಥವಾಗಿಸಿದ್ದಾರೆ.


ಮಲೇರಿಯಾ ಉತ್ಪಾದನಾ ಕೇಂದ್ರ
ಗಾಂಧಿ ಪಾರ್ಕಿನ ಆವರಣದಲ್ಲಿ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಭಾಗದ ಕಾಮಗಾರಿ ಪೂರ್ತಿಯಾಗಿದೆ. ಆದರೆ ಕಾಂಕ್ರೀಟ್ ಆಗಿರುವ ಜಾಗದಲ್ಲಿ ಮಳೆನೀರು ಶೇಖರಣೆಯಾಗಿದ್ದು, ಸೊಳ್ಳೆಗಳು ಹಾರಾಟ ನಡೆಸುತ್ತಿವೆ. ಮಲೇರಿಯಾ ರೋಗದ ವಿರುದ್ಧ ಜಾಗೃತಿ ಮೂಡಿಸುವ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಇಲ್ಲಿನ ಮಲೇರಿಯಾ ಉತ್ಪಾದನಾ ಕೆರೆ ಕಂಡುಬಂದಿಲ್ಲ. ಇದರ ಬಳಿಯಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಆರ್ ಟಿಓ ಕಚೇರಿಯೂ ಇದೆ. ಸದ್ಯಕ್ಕೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಒಂದೆಡೆ ನೀರು ನಿಂತಿದ್ದರೆ, ನಡುವೆ ಗಾಂಧಿ ತಾತನ ಪ್ರತಿಮೆ ಅನಾಥವಾಗಿದೆ.
Mangalore Smart City impact Mahatma Gandhi found as an orphan in Gandhi Park near Town Hall on 75th Independence Day 2021. Gandhi Park turns into a hot spot for Malaria. Political parties who used to celebrate Independence every year at this venue are now found missing.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am