ಬ್ರೇಕಿಂಗ್ ನ್ಯೂಸ್
15-08-21 04:37 pm Mangaluru Correspondent ಕರಾವಳಿ
ಉಳ್ಳಾಲ, ಆ.15: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದ 75 ಸ್ವಾತಂತ್ರ್ಯ ಹೋರಾಟಗಾರ್ತಿಯರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಗೌರವ ಸಮರ್ಪಣೆಯ ಸಲುವಾಗಿ, ಉಳ್ಳಾಲದ ವೀರರಾಣಿ ಅಬ್ಬಕ್ಕಳಿಗೆ ಇಂದು ಗೌರವ ಸಲ್ಲಿಸಲಾಯಿತು.
75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಮಹಿಳಾಮೋರ್ಚಾವು ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಅಮೃತ ಹಬ್ಬದ ರೀತಿಯಲ್ಲಿ ಆಚರಿಸಿದ್ದು ದೇಶಾದ್ಯಂತ 75 ಕಡೆಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಕೆಚ್ಚೆದೆಯಿಂದ ಹೋರಾಡಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಮಹಿಳೆಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ್ದು, ಕರ್ನಾಟಕ ರಾಜ್ಯದಲ್ಲೂ 3 ಕಡೆಗಳಲ್ಲಿ ವೀರ ವನಿತೆಯರಿಗೆ ಗೌರವ ಸೂಚಿಸಿದೆ. ಆ ಪ್ರಯುಕ್ತ ಪೋರ್ಚುಗೀಸರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿದ ಪ್ರಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರಳಾದ ಉಳ್ಳಾಲದ ವೀರರಾಣಿ ಅಬ್ಬಕ್ಕಳಿಗೆ ಹಾರಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರು ಉಳ್ಳಾಲದ ವೃತ್ತದಲ್ಲಿರುವ ರಾಣಿ ಅಬ್ಬಕ್ಕಳ ಪ್ರತಿಮೆಗೆ ಹಾರಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಮೂಡಬಿದಿರೆಗೂ ಅಬ್ಬಕ್ಕನಿಗೂ ಹತ್ತಿರದ ನಂಟಿದೆ. ಬಂಗರಸು ಮಡದಿಯಾಗಿ ಉಳ್ಳಾಲದಲ್ಲಿ ಅಧಿಪತ್ಯ ವಹಿಸಿ ಜನಪರ ಆಡಳಿತ ನೀಡಿದ ವೀರ ಮಹಿಳೆ ಅಬ್ಬಕ್ಕ ಎಂದರು. ಪೋರ್ಚುಗೀಸರು ನಮ್ಮ ಊರಿನ ಮೂಲ ಸಾಂಬಾರ ಬೆಳೆ ಕಾಳು ಮೆಣಸನ್ನು ಹೇರಳವಾಗಿ ರಫ್ತು ಮಾಡಿ ನಮ್ಮ ದೇಶಕ್ಕೆ ಪೋರ್ಚುಗೀಸರ ಕೊಡುಗೆಯಾದ ಕೆಂಪು ಮೆಣಸನ್ನ ಸರಬರಾಜು ಮಾಡುತ್ತಿದ್ದ ಕಾಲದಲ್ಲಿ ಕಾಳು ಮೆಣಸಿನ ವ್ಯಾಪಾರವನ್ನ ಸಮರ್ಥವಾಗಿ ನಿರ್ವಹಿಸಿದ ಅಬ್ಬಕ್ಕ ಕಾಳು ಮೆಣಸಿನ ರಾಣಿ ಎಂದೇ ಹೆಸರು ವಾಸಿಯಾಗಿದ್ದರು. ಪೋರ್ಚುಗೀಸರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ್ದ ಅಬ್ಬಕ್ಕ ಕೊನೆಗೂ ತನ್ನ ಅಳಿಯನ ಕುತಂತ್ರದಿಂದಲೇ ವೀರ ಮರಣವನ್ನಪ್ಪಿದ್ದರು. ಇದುವರೆಗೆ ಕೇವಲ ನಾಲ್ಕೈದು ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನ ಇತಿಹಾಸದಲ್ಲಿ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಬರೀ ಉಪವಾಸ ಸತ್ಯಾಗ್ರಹ, ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ. ಬದಲಾಗಿ ಅಬ್ಬಕ್ಕಳಂತಹ ಎಷ್ಟೋ ದೇಶ ಪ್ರೇಮಿಗಳ ಬಲಿದಾನದ ಫಲವಾಗಿ ದೇಶ ಸ್ವತಂತ್ರಗೊಂಡಿದೆ ಎಂದು ಅವರು ಹೇಳಿದರು.
ಉಳ್ಳಾಲದ ಅಬ್ಬಕ್ಕ ಪ್ರತಿಮೆಯ ರೂವಾರಿ ಸೀತಾರಾಮ ಬಂಗೇರ, ಪ್ರತಿಮೆಯ ಅಲಂಕಾರ ಮಾಡುವ ಧನಂಜಯ್, ನಿವೃತ್ತ ಶಿಕ್ಷಕಿ ಶ್ರೀಮತಿ ಜಾನಕಿ ಪುತ್ರನ್ ಅವರನ್ನ ಅಭಿನಂದಿಸಲಾಯಿತು.
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ದ.ಕ ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಜಿಲ್ಲಾ ಪ್ರ.ಕಾ. ಕಸ್ತೂರಿ ಪಂಜ, ರಾಜ್ಯ ಮಹಿಳಾ ಮೋರ್ಚಾ ಪ್ರಮುಖರಾದ ಭಾಗೀರಥಿ, ಜಿಲ್ಲಾ ಪ್ರಮುಖರಾದ ಪೂಜಾ ಪೈ, ಜಯಂತಿ, ಪೂರ್ಣಿಮ ಶೆಟ್ಟಿ, ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು , ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್, ಪ್ರಮುಖರಾದ ಹೇಮಂತ್ ಶೆಟ್ಟಿ, ಯಶವಂತ್ ಅಮೀನ್ ಮೊದಲಾದವರು ಇದ್ದರು.
Woman mark respect to Rani Abbakka Chowta in Ullal on Independence Day 2021. Abbakka Chowta, the Queen of Ullal, was amongst the first female rulers to fight a fierce war to safeguard her kingdom from European invaders -- in her case the Portuguese. Her story dates back to 1555.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm