ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm