ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm