ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm