ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm