ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm