ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am