ಬ್ರೇಕಿಂಗ್ ನ್ಯೂಸ್
16-08-21 05:22 pm Mangaluru Correspondent ಕರಾವಳಿ
ಉಳ್ಳಾಲ, ಆ.16: ಹರೇಕಳ ಡ್ಯಾಂ ನಿರ್ಮಾಣದ ಯೋಜನೆ ಪ್ರಸ್ತಾಪ ಬಂದಾಗ ಅನೇಕರು ಇದು ಸಾಧ್ಯನಾ ಎಂದು ಪ್ರಶ್ನೆ ಮಾಡಿದ್ದರು. ಇದೀಗ ಅಣೆಕಟ್ಟು ಪೂರ್ಣಗೊಳ್ಳುತ್ತಿದ್ದು ಅಸಾಧ್ಯವಾದುದನ್ನ ಸಾಧ್ಯವನ್ನಾಗಿಸುವುದೇ ನನ್ನ ಕಾರ್ಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.
ಹರೇಕಳ ಉಲ್ಲಾಸ್ ನಗರ (ಬಾವಲಿ ಗುರಿ)ದಲ್ಲಿ ಸುಮಾರು 1 ಕೋಟಿ 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗ್ರಾಮ ಸೌಧ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಪಂಚಾಯತ್ ಆಡಳಿತ ಅಚ್ಚುಕಟ್ಟಾಗಿದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಹರೇಕಳವನ್ನ ಮಾದರಿ ಗ್ರಾಮ ಪಂಚಾಯತ್ ಆಗಿ ನಿರ್ಮಿಸಬೇಕು. ಕಾಮಗಾರಿ ಒಮ್ಮೆ ಆರಂಭವಾದರೆ ಅದು ಹಂತ ಹಂತವಾಗಿ ಅಭಿವೃದ್ದಿ ಕಾಣುತ್ತದೆ. ಸ್ವಂತ ಮನೆ ಕಟ್ಟಿದಷ್ಟೆ ಆಸಕ್ತಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಟ್ಟಡ ನಿರ್ಮಿಸಬೇಕು. ಹರೇಕಳ ಡ್ಯಾಂ ನಿರ್ಮಾಣದ ಪ್ರಸ್ತಾವನೆ ಬಂದಾಗ ಅದು ಆಗುವುದು ಸಾಧ್ಯವೇ ಎಂದು ಕೆಲವರು ಆಡಿಕೊಳ್ಳುತ್ತಿದ್ದರು. ಅಸಾಧ್ಯ ಕಾಮಗಾರಿಗಳನ್ನ ಸಾಧ್ಯವಾಗಿಸೋದೆ ನನ್ನ ಗುರಿ ಎಂದರು. ಹರೇಕಳ ಡ್ಯಾಂ ಕಮ್ ಸೇತುವೆ ಲೋಕಾರ್ಪಣೆ ಆದ ಮೇಲೆ ಹರೇಕಳ ಗ್ರಾಮಸ್ಥರಿಗೆ ಮಂಗಳೂರು ನಗರ ಹತ್ತಿರವಾಗಲಿದೆ. ಪ್ರಯಾಣ ಬಹಳ ಸಲೀಸಾಗಲಿದೆ ಎಂದರು.





ಮಾಜಿ ತಾಪಂ ಸದಸ್ಯ ಮುಸ್ತಾಫ ಹರೇಕಳ ಮಾತನಾಡಿ ಹರೇಕಳ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡವು ಹಳೆಯದಾಗಿದ್ದು ಸ್ಥಳಾವಕಾಶದ ಕೊರತೆ ಇರುವುದರಿಂದ ಗ್ರಾಮಸಭೆ ಮತ್ತು ಇತರ ಸಭೆಗಳನ್ನು ನಡೆಸಲು ಅಸಾಧ್ಯವಾಗಿದೆ. ಹಾಗೆಯೇ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರ ಅಭಿಪ್ರಾಯದಂತೆ ಹರೇಕಳ ಗ್ರಾಮ ಪಂಚಾಯಿತಿಗೆ ಹರೇಕಳದ ಉಲ್ಲಾಸ ನಗರದಲ್ಲಿ 50 ಸೆಂಟ್ಸ್ ಸ್ಥಳದಲ್ಲಿ 5000 ಚದರಡಿಯ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಯೋಜನೆ ಹಾಕಲಾಗಿದೆ ಎಂದರು.
ಹರೇಕಳ ಗ್ರಾಮ ಪಂಚಾಯತಿ ಅಧ್ಯಕ್ಷ ಬದ್ರುದ್ದೀನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹಾಜಬ್ಬ , ಧಾರ್ಮಿಕ ಗುರು ಸಯ್ಯದ್ ಸರ್ಫುದ್ದೀನ್ ತಂಞಳ್, ರೆ.ಫಾ. ಜಾನ್, ಕುತ್ತಿಮುಗೇರ್ ದೇವಸ್ಥಾನದ ಮೋಹನ್ ಕೆ, ಹರೇಕಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಲ್ಯಾಣಿ, ಮಾಜಿ ಅಧ್ಯಕ್ಷರಾದ ಮಹಾಬಲ ಹೆಗ್ಡೆ, ಅನಿತಾ ಡಿಸೋಜ, ಗುಲಾಬಿ, ಶಾಲಿ, ಸಂತೋಷ್ ಶೆಟ್ಟಿ ಅಸೈಗೋಳಿ, ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು, ರಾಮ್ ದಾಸ್ ಪೂಂಜ, ರಿಚರ್ಡ್, ಆದಂ ಸಾಹೇಬ, ಲತೀಫ್, ಎಸ್, ಮಹಮ್ಮದ್, ಇದ್ದಿನ್ ಕುಂಞಿ, ರವೀಂದ್ರ ರೈ ಹರೇಕಳ, ನಾಗರಾಜ್, ರಾಧಾಕೃಷ್ಣ ರೈ, ಅಬ್ದುಲ್ ಮಜೀದ್ ,ತ್ಯಾಗಂ ಹರೇಕಳ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು.
I do things that are impossible says UT Khader in Ullal while laying foundation of Harekala Dam.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm