ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm