ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm