ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm